• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಬಲಿಷ್ಠ ಪರಿಸರ ನೀತಿಗಳಿಂದಾಗಿ ಬಲಿಷ್ಠ ಆರ್ಥಿಕತೆ ನಿರ್ಮಾಣ ನಿರೂಪಿಸಿದ ಭಾರತ: ಪ್ರಧಾನಿ ನರೇಂದ್ರ ಮೋದಿ

November 28, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆ ಶೃಂಗಸಭೆ ಮತ್ತು ಪ್ರದರ್ಶನ (ರಿ-ಇನ್ವೆಸ್ಟ್ 2020)ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಈ ಶೃಂಗಸಭೆಯನ್ನು ಆಯೋಜಿಸಿದೆ. ಈ ರಿ-ಇನ್ವೆಸ್ಟ್ 2020ಯ ಘೋಷವಾಕ್ಯ “ಸುಸ್ಥಿರ ಇಂಧನ ಬದಲಾವಣೆಗೆ ಆವಿಷ್ಕಾರಗಳು’’ಎಂಬುದಾಗಿದೆ.
ನವೀಕರಿಸಬಹುದಾದ ಇಂಧನ ವಲಯದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಅತ್ಯಲ್ಪ ಅವಧಿಯಲ್ಲಿಯೇ ಮೆಗಾವ್ಯಾಟ್ ನಿಂದ ಗಿಗಾ ವ್ಯಾಟ್ ಗೆ ಪ್ರಗತಿ ಹೊಂದಿರುವುದಕ್ಕೆ ಮತ್ತು ನಾವು ಹಿಂದಿನ ಆವೃತ್ತಿಗಳಲ್ಲಿ ಮಾತನಾಡಿದ್ದಂತೆ “ಒಂದು ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್’’ ಸಾಕಾರವಾಗುತ್ತಿದೆ ಎಂದು ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದರು. ಕಳೆದ ಆರು ವರ್ಷಗಳಲ್ಲಿ ಭಾರತದ ಪಯಣ ಸರಿಸಾಟಿಯಿಲ್ಲದಾಗಿದೆ ಎಂದರು. ಭಾರತ ಇಂಧನ ಉತ್ಪಾದನಾ ಸಾಮರ್ಥ್ಯ ಮತ್ತು ಜಾಲ ವ್ಯಾಪಕವಾಗಿ ವಿಸ್ತರಿಸಲಾಗಿದ್ದು, ಪ್ರತಿಯೊಬ್ಬ ವ್ಯಕ್ತಿಗೂ ವಿದ್ಯುತ್ ಲಭ್ಯವಾಗುವಂತೆ ಮಾಡಲಾಗಿದ್ದು, ಆ ಮೂಲಕ ಆತನ ಸಂಪೂರ್ಣ ಸಾಮರ್ಥ್ಯ ಬಳಕೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು. ಇಂದು ಭಾರತ, ನವೀಕರಿಸಬಹುದಾದ ಇಂಧನ ಸಾಮರ್ಥ್ಯ ವಿಶ್ವದಲ್ಲಿ 4ನೇ ಸ್ಥಾನದಲ್ಲಿದೆ ಮತ್ತು ಅದು ಎಲ್ಲ ಪ್ರಮುಖರಾಷ್ಟ್ರಗಳಿಗಿಂತ ವೇಗವಾಗಿ ಮುಂದುವರಿದಿದೆ. ಭಾರತ ಸದ್ಯ 136 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೊಂದಿದ್ದು, ಅದು ನಮ್ಮ ಒಟ್ಟು ಸಾಮರ್ಥ್ಯದ ಶೇ.36ರಷ್ಟಾಗಿದೆ.


2017ರಿಂದೀಚೆಗೆ ಕಲ್ಲಿದ್ದಲು ಆಧಾರಿತ ಅಣುವಿದ್ಯುತ್ ಗಿಂತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಭಾರತದಲ್ಲಿ ವಾರ್ಷಿಕ ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದರು. ಕಳೆದ ಆರು ವರ್ಷಗಳಲ್ಲಿ ಭಾರತದ ಒಟ್ಟು ಸ್ಥಾಪಿತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಎರಡೂವರೆಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಮಂತ್ರಿ ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ನವೀಕರಿಸಬಹುದಾದ ಇಂಧನ ವಲಯದಲ್ಲಿ ಬಂಡವಾಳ ಹೂಡಿಕೆ ಮಾಡುವುದರಿಂದ ಕೈಗೆಟಕುವ ದರದಲ್ಲಿ ವಿದ್ಯುತ್ ಲಭ್ಯವಾಗುವ ಜೊತೆಗೆ ಅದರ ಪ್ರಮಾಣ ಹೆಚ್ಚಾಗಿ, ಉತ್ಪಾದನಾ ವೆಚ್ಚ ಕಡಿಮೆಯಾಗಿದೆ ಎಂದು ಹೇಳಿದರು. ಬಲಿಷ್ಠ ಪರಿಸರ ನೀತಿಗಳಿಂದ ದೇಶ ವಿದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸಬಹುದು ಎಂದು ನಾವು ಜಗತ್ತಿಗೆ ತೋರಿಸಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಪರಿಣಾಮಕಾರಿ ಇಂಧನ ಖಾತ್ರಿ ಕೇವಲ ಒಂದು ಸಚಿವಾಲಯ ಅಥವಾ ಇಲಾಖೆಗೆ ಸೀಮಿತವಾಗಿಲ್ಲ. ಬದಲಿಗೆ ಅದು ಇಡೀ ಸರ್ಕಾರದ ಗುರಿಯಾಗಿದೆ ಎಂದು ಹೇಳೀದರು. ನಮ್ಮೆಲ್ಲಾ ನೀತಿಗಳಲ್ಲೂ ಪರಿಣಾಮಕಾರಿ ಇಂಧನ ಸಾಧನೆ ಪರಿಗಣಿಸಲಾಗುತ್ತಿದೆ.


ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಸಾಧನೆ ಆಧರಿತ ಪ್ರೋತ್ಸಾಹ ಧನ(ಪಿಎಲ್ಐ) ಯಶಸ್ಸಿನ ನಂತರ ಇದೀಗ ಹೆಚ್ಚಿನ ದಕ್ಷತೆಯ ಸೌರ ಫಲಕಗಳಿಗೂ ಅದೇ ರೀತಿ ಪ್ರೋತ್ಸಾಹ ಧನವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ವ್ಯವಹಾರಕ್ಕೆ ಪೂರಕ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಅಗ್ರ ಆದ್ಯತೆಯಾಗಿದೆ. ಹೂಡಿಕೆದಾರರಿಗೆ ನೆರವು ನೀಡಲು ನಿರ್ದಿಷ್ಟ ಯೋಜನಾ ಅಭಿವೃದ್ಧಿ ಕೋಶಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು. ಮುಂದಿನ ದಶಕದಲ್ಲಿ ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರೀ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಿಸಿದ ಅವರು, ಪ್ರತಿ ವರ್ಷ ಸುಮಾರು 20 ಬಿಲಿಯನ್ ಮೌಲ್ಯದ ವಾಣಿಜ್ಯ ವ್ಯವಹಾರಗಳು ನಡೆಯುವ ಸಂಭವನೀಯತೆ ಇದೆ ಎಂದರು. ಅವರು ಭಾರತದ ನವೀಕರಿಸಬಹುದಾದ ಇಂಧನ ವಲಯ ಪಯಣದಲ್ಲಿ ಸೇರ್ಪಡೆಯಾಗುವಂತೆ ಹೂಡಿಕೆದಾರರು, ಪ್ರವರ್ತಕರು ಮತ್ತು ವಾಣಿಜ್ಯೋದ್ಯಮಿಗಳಿಗೆ ಆಹ್ವಾನ ನೀಡಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: National News Tagged With: Development cell, electronic products, energy generation, new and, power generation capacity, renewable energy, sustainable energy change, ಅಭಿವೃದ್ಧಿ ಕೋಶ, ಇಂಧನ ವಲಯದಲ್ಲಿ, ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ, ನವೀಕರಿಸಬಹುದಾದ ಇಂಧನ, ಮೆಗಾವ್ಯಾಟ್ ನಿಂದ ಗಿಗಾ ವ್ಯಾಟ್ ಗೆ ಪ್ರಗತಿ ಹೊಂದಿರುವುದಕ್ಕೆ, ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಅತ್ಯಲ್ಪ, ಸುಸ್ಥಿರ ಇಂಧನ ಬದಲಾವಣೆ, ಹೊಸ ಮತ್ತು

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 919,931 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಬೆಳ್ಳಕ್ಕಿ ಬೆಡಗು

January 21, 2021 By Lakshmikant Gowda

ಸಾವಿರಾರು ಭಕ್ತಾದಿಗಳ ಹರ್ಷೋದ್ಗಾರ ನಡುವೆ ಸಂಪನ್ನಗೊಂಡ: ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ

January 21, 2021 By bkl news

“ದಂಡಿ” ಚಲನ ಚಿತ್ರಕ್ಕೆ ಕಲಾವಿದರ ಆಯ್ಕೆ

January 20, 2021 By Lakshmikant Gowda

ನಡೆದುಕೊಂಡು ಹೋಗುಟ್ಟಿದ್ದ ಮಹಿಳೆಯ ಮೇಲೆ ಮಂಗನ ದಾಳಿ ಮಹಿಳೆ ಗಂಭೀರ

January 19, 2021 By bkl news

ನಿಧಿ ಸಮರ್ಪಣಾಅಭಿಯಾನಕ್ಕೆ ಚಾಲನೆ

January 19, 2021 By Vishwanath Shetty

ದತ್ತಾತ್ರೇಯ ನಾರಾಯಣ ಭಟ್ಟ ನಿದನ

January 18, 2021 By Vishwanath Shetty

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.