• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ

December 2, 2020 by Lakshmikant Gowda Leave a Comment

ಹೊನ್ನಾವರ: ಅನುದಾನಿತ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಅನುಮತಿ ನೀಡದಿರುವುದರಿಂದ ಈ ಶಿಕ್ಷಣ ಸಂಸ್ಥೆಗಳು ತೀವ್ರ ಸಂಕಷ್ಟ ಎದುರಿಸಬೇಕಾಗಿ ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಪ್ರಾಚಾರ್ಯರ ಒಕ್ಕೂಟದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು.

pracharya mandali sabhe

ಅವರು ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಮಂಗಳವಾರ ನಡೆದ ಒಕ್ಕೂಟದ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯಾನಂತರ ಶಿಕ್ಷಣ ನೀಡುವಲ್ಲಿ ಮಹತ್ತರ ಪಾತ್ರ ವಹಿಸಿದ ಈ ಅನುದಾನಿತ ಶಿಕ್ಷಣ ಸಂಸ್ಥೆಗಳು ಸರ್ಕಾರದ ತಾರತಮ್ಯ ಹಾಗೂ ನಿರ್ಲಕ್ಷ್ಯ ಧೋರಣೆಗಳಿಂದಾಗಿ ಇಂದು ಕವಲುದಾರಿಯಲ್ಲಿವೆ.ಶುಲ್ಕ ವಿನಾಯತಿ,ಉಪನ್ಯಾಸಕರ ನೇಮಕಾತಿ ಮೊದಲಾದ ಸೌಲಭ್ಯಗಳನ್ನು ಸರ್ಕಾರಿ ಕಾಲೇಜುಗಳಿಗೆ ಮಾತ್ರ ನೀಡಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳನ್ನು ಕಡೆಗಣಿಸಲಾಗುತ್ತಿದೆ.

20 ವರ್ಷಗಳ ಹಿಂದೆ ಪದವಿ ಕಾಲೇಜುಗಳಿಂದ ಪದವಿ ಪೂರ್ವ ಕಾಲೇಜುಗಳನ್ನು ಬೇರ್ಪಡಿಸುವ ಆದೇಶ ನೀಡಿದ ಸರ್ಕಾರ ಈ ಕಾಲೇಜುಗಳ ಹುದ್ದೆಗಳಿಗೆ ಅನುದಾನ ನೀಡಿಲ್ಲ.1995ರಿಂದ ಸಂಸ್ಥೆ ಮಾಡಿಕೊಳ್ಳುವ ತಾತ್ಕಾಲಿಕ ಉಪನ್ಯಾಸಕರ ಸಂಬಳ ಅನುದಾನವನ್ನೂ ಸರ್ಕಾರ ನಿಲ್ಲಿಸಿದೆ.ಮೂಲ ಸೌಕರ್ಯಗಳ ಅಭಿವೃದ್ಧಿಗೆ ಯುಜಿಸಿ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಲಾಗಿದೆ.ಕಳೆದ ಹತ್ತಾರು ವರ್ಷಗಳಿಂದ ಎಲ್ಲ ರಾಜಕೀಯ ಪಕ್ಷಗಳಿಗೆ ಸೇರಿದ ಸರ್ಕಾರಗಳೂ ಅನುದಾನಿತ ಕಾಲೇಜುಗಳ ಬಗ್ಗೆ ಈ ತಾರತಮ್ಯ ನೀತಿ ಅನುಸರಿಸುತ್ತ ಬಂದಿವೆ ಎಂದು ಅವರು ಹೇಳಿದರು.

ಅನುದಾನಿತ ಕಾಲೇಜುಗಳು ತೀವ್ರ ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲೂ ಸುಸಜ್ಜಿತ ಪ್ರಯೋಗಾಲಯ ಸೇರಿದಂತೆ ಸರ್ಕಾರಿ ಕಾಲೇಜುಗಳಿಗಿಂತ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಗುಣಮಟ್ಟದ ಶಿಕ್ಷಣ ನೀಡುತ್ತಿವೆ.ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದರೆ ಅನುದಾನಿತ ಕಾಲೇಜುಗಳ ಮುಖ್ಯ ಸಮಸ್ಯೆ ಬಗೆಹರಿಯಲಿದ್ದು ಅನುಮತಿ ನೀಡುವಂತೆ ಕೋರಿ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಲಿಖಿತ ಮನವಿ ಸಲ್ಲಿಸಿ ಆಗ್ರಹಿಸಲಾಗುವುದು ಎಂದು ತಿಳಿಸಿದರು.

ಮಂಡಳಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ,ಕಾರ್ಯದರ್ಶಿ ಪ್ರೊ.ಎಸ್.ಎಸ್.ಹೆಗಡೆ,ಕುಮಟಾದ ಕೆನರಾ ಸೊಸೈಟಿಯ ಕಾರ್ಯದರ್ಶಿ ವಿನೋದ ಪ್ರಭು,ಜಿ.ಎಸ್.ಭಟ್ಟ ಉಪ್ಪೋಣಿ,ಸುಧೀರ ಭಟ್ಟ,ಡಾ.ಕೆ.ಬಿ.ಕಿಣಿ,ಕೃಷ್ಣಮೂರ್ತಿ ಭಟ್ಟ,ಎಸ್.ಎಂ.ಭಟ್ಟ,ಪ್ರೊ.ಜಿ.ಪಿ.ಹೆಗಡೆ,ಸುಧೀರ್ ಭಟ್,ಡಾ.ಕೆ.ಬಿ.ಕಿಣಿ,ಸುಜಾತಾ ಲಾಡ್,ಡಾ.ಪ್ರಕಾಶ ಪಂಡಿತ ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Development of Facilities, Government Discrimination, Great Role, Independent Education, NEGLIGENCE, Recruitment of Non-teaching Staff, Recruitment of Vacancies, Uttara Kannada District Private Aided Education, ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ, ಖಾಲಿ ಹುದ್ದೆಗಳ ನೇಮಕಾತಿ, ನಿರ್ಲಕ್ಷ್ಯ ಧೋರಣೆ, ಬೋಧಕೇತರ ಸಿಬ್ಬಂದಿಗಳ ನೇಮಕಾತಿ, ಮಹತ್ತರ ಪಾತ್ರ, ಸರ್ಕಾರದ ತಾರತಮ್ಯ, ಸೌಕರ್ಯಗಳ ಅಭಿವೃದ್ಧಿ, ಸ್ವಾತಂತ್ರ್ಯಾನಂತರ ಶಿಕ್ಷಣ

Explore More:

About Lakshmikant Gowda

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...