ಭಟ್ಕಳ: ತಾಲೂಕಿನ ತೆಂಗಿನಗುಂಡಿಯಲ್ಲಿ ಅರೇಬಿಯನ್ ಸಮುದ್ರದಲ್ಲಿ ಮುಳುಗಿ ಯುವಕನೊರ್ವ ಪ್ರಾಣ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ.
ಮೃತ ಯುವಕ ತೆಂಗಿನಗುಂಡಿ ಹೆಬಳೆ ನಿವಾಸಿ ಶಪೀಸಲ್ ಹಿಬ್ಬುರೆಹಮಾನ ಡಾಂಗೀ (24) ಎಂದು ತಿಳಿದು ಬಂದಿದೆ. ಮೃತ ಯುವಕ ತನ್ನ ಸ್ನೇಹಿತರೊಂದಿಗೆ ಸಮುದ್ರದ ಕ್ಕೆ ಈಜಲು ತೆರಳಿದಾಗ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ. ನೀರಿನಲ್ಲಿ ಮುಳುಗಿದ ಒಂದು ಗಂಟೆಯ ಬಳಿಕ ದೇಹ ಸಮುದ್ರದಲ್ಲಿ ಪತ್ತೆಯಾಗಿವೆ ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯು ವೇಳೆ ದಾರಿಯಲ್ಲಿ ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರಕಿದೆ. ಯುವಕರು ಇತ್ತೀಚೆಗೆ ಬಿ.ಕಾಂ ಪದವಿ ಪೂರೈಸಿದ್ದಾ ಎಂದು ತಿಳಿದುಬಂದಿದೆ.
ಮರಣೋತ್ತರ ನಂತರ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು.ಮೃತರಿಗೆ ಅಂತಿಮ ನಮನ ಸಲ್ಲಿಸಲು ಅವರ ತಂದೆ ಮತ್ತು ಚಿಕ್ಕಪ್ಪ ದುಬೈನಿಂದ ಹಿಂದಿರುಗುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment