• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ

December 15, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿದೆ. ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು.

modi 2


ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ರೈತರ ಕಾಳಜಿಗೆ ಸ್ಪಂದಿಸುತ್ತದೆ ಎಂದು ಪುನರುಚ್ಚರಿಸಿದರು. ಕೃಷಿ ಸುಧಾರಣೆಗಳಲ್ಲಿ ಕಳೆದ ಹಲವು ವರ್ಷಗಳಿಂದ ರೈತ ಸಂಘಟನೆಗಳ ಮತ್ತು ಪ್ರತಿಪಕ್ಷಗಳ ಬೇಡಿಕೆಗಳನ್ನು ಸರ್ಕಾರ ಕೈಗೊಂಡಿದೆ ಎಂದರು.
ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಕಚ್ ರೈತರನ್ನು ಶ್ಲಾಘಿಸಿದ ಅವರು, ಈಗ ಅವರು ವಿದೇಶಕ್ಕೆ ಹಣ್ಣು ರಫ್ತು ಮಾಡುತ್ತಿದ್ದಾರೆ ಎಂದರು. ಇದು ನಮ್ಮ ರೈತರ ನಾವಿನ್ಯತೆಯ ಉತ್ಸಾಹ ತೋರಿಸುತ್ತದೆ. ಸರ್ಕಾರದ ಪ್ರೋತ್ಸಾಹದಾಯಕ ಪ್ರವೇಶದಿಂದಾಗಿ ಕೃಷಿ, ಹೈನುಗಾರಿಕೆ ಮತ್ತು ಮೀನುಗಾರಿಕೆ ವಲಯಗಳು ಕಳೆದ ಎರಡು ದಶಕಗಳಿಂದ ಗುಜರಾತ್ ನಲ್ಲಿ ವಿಕಾಸಗೊಂಡಿವೆ ಎಂದರು. ರೈತರ ಸಬಲೀಕರಣಕ್ಕೆ ಗುಜರಾತ್ ಸರ್ಕಾರದ ಕೊಡುಗೆಗಳನ್ನು ವಿವರಿಸಿದರು.
ಇಂದು, ಕಚ್ ನವ ಯುಗದ ತಂತ್ರಜ್ಞಾನ ಮತ್ತು ನವ ಯುಗದ ಆರ್ಥಿಕತೆ ಎರಡರಲ್ಲೂ ದಾಪುಗಾಲು ಇಟ್ಟಿದೆ. ಖರೇರಾದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿರುವ ನವೀಕರಿಸಬಹುದಾದ ಇಂಧನ ಪಾರ್ಕ್, ಮಾಂಡವಿಯ ಉಪ್ಪು ನೀರು ಶುದ್ಧೀಕರಣ ಘಟಕ ಮತ್ತು ಅಂಜಾರ್ ನ ಸರ್ಹದ್ ದೇಹ್ರಿಯಲ್ಲಿನ ಹೊಸ ಅಣು ಸ್ಥಾವರಗಳು ಕಚ್ ಅಭಿವೃದ್ಧಿಯ ಪಯಣದಲ್ಲಿ ಪ್ರಮುಖ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತವೆ ಎಂದರು. ಈ ಯೋಜನೆಗಳ ಪ್ರಯೋಜನಗಳು ವಲಯದ ಬುಡಕಟ್ಟು ಜನರು, ರೈತರು, ದನಗಾಹಿಗಳು ಮತ್ತು ಶ್ರೀಸಾಮಾನ್ಯರಿಗೆ ದೊರಕಲಿದೆ ಎಂದರು. ಇಂದು ಕಚ್ ದೇಶದಲ್ಲಿ ಅತ್ಯಂತ ತ್ವರಿತವಾಗಿ ಅಭಿವೃದ್ಧಿ ಕಾಣುತ್ತಿರುವ ಪ್ರದೇಶವಾಗಿದೆ ಎಂದರು. ಇಲ್ಲಿನ ಸಂಪರ್ಕ ದಿನದಿಂದ ದಿನಕ್ಕೆ ಉತ್ತಮಗೊಳ್ಳುತ್ತಿದೆ ಎಂದರು.
ಗುಜರಾತ್ ಜನತೆ ರಾತ್ರಿ ಊಟದ ಸಮಯದಲ್ಲಿ ವಿದ್ಯುತ್ ನೀಡುವಂತೆ ಸರಳ ಬೇಡಿಕೆ ಇಡುತ್ತಿದ್ದುದನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಗುಜರಾತ್ ನಲ್ಲಿ ಪರಿಸ್ಥಿತಿ ತುಂಬಾ ಬದಲಾಗಿದೆ ಎಂದರು. ಇಂದಿನ ಗುಜರಾತ್ ಯುವಕರಿಗೆ ಹಿಂದೆ ಇದ್ದ ಅನಾನುಕೂಲತೆಗಳ ಅರಿವೆ ಇಲ್ಲ ಎಂದರು. ಕಚ್‌ ನಲ್ಲಿನ ಜನಸಂಖ್ಯೆಯು ನೇತ್ಯಾತ್ಮಕ ವೃದ್ಧಿಯನ್ನು ಹೊಂದಿತ್ತು ಎಂಬುದನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈಗ ಜನರು ವಲಸೆ ಹೋಗುವುದನ್ನು ನಿಲ್ಲಿಸಿದ್ದಾರೆ, ಜನರು ಹಿಂತಿರುಗುತ್ತಿರುವುದರಿಂದ ಜನಸಂಖ್ಯೆಯು ಅಭಿವೃದ್ಧಿ ಹೊಂದುತ್ತಿದೆ, ಭಾರಿ ಭೂಕಂಪದ ನಂತರ ಕಚ್‌ ನ ನಾಲ್ಕು ಪಟ್ಟು ಅಭಿವೃದ್ಧಿಯ ಬಗ್ಗೆ ಅಧ್ಯಯನ ಮಾಡಲು ಸಂಶೋಧಕರು ಮತ್ತು ವಿಶ್ವವಿದ್ಯಾಲಯಗಳಿಗೆ ಕರೆ ನೀಡಿದರು.
ಕಳೆದ 20 ವರ್ಷಗಳಲ್ಲಿ ಹಲವು ರೈತ ಸ್ನೇಹಿ ಯೋಜನೆ ರೂಪಿಸಿದ ಗುಜರಾತ್ ಸರ್ಕಾರವನ್ನು ಶ್ಲಾಘಿಸಿದರು. ಸೌರ ಇಂಧನ ಸಾಮರ್ಥ್ಯ ಬಲಪಡಿಸುವ ಕಾರ್ಯದಲ್ಲಿ ಗುಜರಾತ್ ಮುಂಚೂಣಿಯಲ್ಲದೆ ಎಂದರು.
21ನೇ ಶತಮಾನದಲ್ಲಿ ಇಂಧನ ಭದ್ರತೆ ಮತ್ತು ಜಲ ಭದ್ರತೆ ಪ್ರಮುಖವಾದ್ದಾಗಿವೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಕಚ್ ನ ಜಲ ಕ್ಷಾಮ ನಿವಾರಣೆಗೆ ನರ್ಮದಾ ನದಿ ನೀರು ಹರಿಸುವ ಬಗ್ಗೆ ಮಾತನಾಡಿದಾಗ ಅಣಕವಾಡುತ್ತಿದ್ದ ಕಾಲವನ್ನು ಸ್ಮರಿಸಿದರು. ಈಗ ನರ್ಮದಾ ನೀರು ಕಚ್ ಗೆ ಬಂದಿದ್ದು, ಕಚ್ ಪ್ರಗತಿ ಸಾಧಿಸುತ್ತಿದೆ ಎಂದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: National News, Trending Tagged With: agricultural improvement, farmers, garden, herdsmen, hybrid renewable energy, packing plant, plant, Tribals, ಉದ್ಯಾನ, ಕೃಷಿ ಸುಧಾರಣೆ, ಘಟಕ, ದನಗಾಹಿಗಳು, ಪೊಟ್ಟಣೀಕರಣ ಸ್ಥಾವರ, ಬುಡಕಟ್ಟು ಜನರು, ರೈತರು, ಹೈಬ್ರೀಡ್ ನವೀಕರಿಸಬಹುದಾದ ಇಂಧನ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...