• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

December 19, 2020 by Sachin Hegde Leave a Comment

ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ವರ್ಚುವಲ್‌ ಮೂಲಕ ನೆರವೇರಿಸಿದರು. ಈ ಯೋಜನೆಗಳಲ್ಲಿ 10,904 ಕೋಟಿ ರೂ.ವೆಚ್ಚದ 1,197 ಕಿ.ಮೀ ರಸ್ತೆಗಳು ಸೇರಿವೆ.

WhatsAppImage2020 12 19at3.33.39PMCTN8

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ವಹಿಸಿದ್ದರು, ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ ಸದಾನಂದ ಗೌಡ, ಜನರಲ್ ಡಾ ವಿ ಕೆ ಸಿಂಗ್, ರಾಜ್ಯದ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಗಡ್ಕರಿ ಅವರು, ಕಳೆದ ಆರು ವರ್ಷಗಳಲ್ಲಿ ಕರ್ನಾಟಕದಲ್ಲಿ 900 ಕಿ.ಮೀ.ಗಿಂತ ಹೆಚ್ಚಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಗಳಿಗೆ ಸೇರಿಸಲಾಗಿದೆ. ಈಗ ರಾಜ್ಯದಲ್ಲಿ ಒಟ್ಟು 7,652 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಇದೆ ಎಂದರು. 2,384 ಕಿ.ಮೀ ಉದ್ದದ 37,311 ಕೋಟಿ ರೂ. ವೆಚ್ಚದ ಒಟ್ಟು 71 ಕಾಮಗಾರಿಗಳು ನಡೆಯುತ್ತಿವೆ. ಇವುಗಳಲ್ಲಿ, 12,286 ಕೋಟಿ ರೂ. ವೆಚ್ಚದ 1,127 ಕಿ.ಮೀ ಉದ್ದದ ಹೊಂದಿರುವ 26 ಕಾಮಗಾರಿಗಳಲ್ಲಿ ಶೇ.70 ಕ್ಕಿಂತ ಹೆಚ್ಚಿನ ಕೆಲಸ ಮುಗಿದಿದೆ. 1257 ಕಿ.ಮೀ ಉದ್ದದ 25,025 ಕೋಟಿ ರೂ. ವೆಚ್ಚದ 45 ಕಾಮಗಾರಿಗಳಲ್ಲಿ ಶೇ 70ರವರೆಗೆ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಅವರು ಹೇಳಿದರು.

WhatsAppImage2020 12 19at3.35.59PMASV9
WhatsAppImage2020 12 19at3.35.20PM5UH0

ವ್ಯಾಪಾರ ಮತ್ತು ಆರ್ಥಿಕತೆಯ ಅನುಕೂಲಕ್ಕಾಗಿ ಬಂದರುಗಳಿಗೆ ಸುಗಮ ಸಂಪರ್ಕವನ್ನು ಕಲ್ಪಿಸಲು, ಗೋವಾ ಗಡಿಯಿಂದ ಕೇರಳ ಗಡಿಯವರೆಗಿನ ನಾಲ್ಕು ಪಥಗಳ ರಸ್ತೆಯು, ಬಂದರು ನಗರವಾದ ಬೇಲೇಕೇರಿ, ಕಾರವಾರ ಮತ್ತು ಮಂಗಳೂರನ್ನು ಸಂಪರ್ಕಿಸಲಿದ್ದು, 278 ಕಿ.ಮೀ. ಉದ್ದದ ಈ ರಸ್ತೆ ಕಾಮಗಾರಿಯನ್ನು 3443 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದಲ್ಲದೆ, ರಸ್ತೆ ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ, ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಶಿರಡಿ ಘಾಟ್‌, ಎನ್‌ಎಚ್ -73 ರಲ್ಲಿ ಚಾರ್ಮಡಿ ಘಾಟ್ ಮತ್ತು ಎನ್‌ಎಚ್ -275 ರಲ್ಲಿ ಸಂಪಾಜೆ ಘಾಟ್ ನಲ್ಲಿ ಬೆಟ್ಟದ ಇಳಿಜಾರುಗಳಲ್ಲಿ ರಕ್ಷಣಾತ್ಮಕ ಕ್ರಮಗಳನ್ನು ಒದಗಿಸುವ ಮೂಲಕ ಸುರಕ್ಷತೆಯನ್ನು ಸುಧಾರಿಸುವ 115 ಕೋಟಿ ರೂ. ವೆಚ್ಚದ 3 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.
ಮುಂಬರುವ ವರ್ಷಗಳಲ್ಲಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಸುಮಾರು 1,16,144 ಕೋಟಿ ರೂ. ಗಳನ್ನು ಹೂಡಿಕೆ ಮಾಡಲಿದೆ. 2019-21ನೇ ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿ 5083 ಕೋಟಿ ರೂ.ವೆಚ್ಚದ 275 ಕಿ.ಮೀ.ನ 11 ರಸ್ತೆ ಯೋಜನೆಗಳಿಗೆ ಟೆಂಡರ್ ನೀಡಲಾಗಿದೆ ಎಂದು ಅವರು ಹೇಳಿದರು.

WhatsAppImage2020 12 19at3.34.52PMXX4F


ರಾಜ್ಯಕ್ಕೆ ಈವರೆಗೆ 8,330 ಕೋಟಿ ರೂ.ಗಳ ಸಿಆರ್‌ಎಫ್ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಸಿಆರ್‌ಎಫ್ ಅಡಿಯಲ್ಲಿ ಈ ವರ್ಷದ ಒಟ್ಟು 435 ಕೋಟಿ ರೂ.ಗಳಲ್ಲಿ 217 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷದ ಉಳಿದ 218 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಶ್ರೀ ಗಡ್ಕರಿ ಘೋಷಿಸಿದರು.
ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥೆನಾಲ್ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕೆಂದು ಶ್ರೀ ಗಡ್ಕರಿ ಕರೆ ನೀಡಿದರು, ದೇಶವು ಈಗಾಗಲೇ ಸಕ್ಕರೆ ಮತ್ತು ಅಕ್ಕಿಯನ್ನು ಹೆಚ್ಚುವರಿಯಾಗಿ ಉತ್ಪಾದಿಸುತ್ತಿದೆ ಮತ್ತು ಸರ್ಕಾರದಲ್ಲಿ ಸಾಕಷ್ಟು ಸಂಗ್ರಹವಿದೆ ಎಂದು ಅವರು ಹೇಳಿದರು. ಹೆಚ್ಚುವರಿ ಸಂಗ್ರಹವನ್ನು ಎಥೆನಾಲ್ ಆಗಿ ಪರಿವರ್ತಿಸಬಹುದು, ಇದನ್ನು ವಾಹನಗಳಿಗೆ ಪರ್ಯಾಯ ಇಂಧನವಾಗಿ ಬಳಸಬಹುದು. ಇದು ರೈತರ ಆದಾಯವನ್ನು ಸುಧಾರಿಸುವುದಲ್ಲದೆ, ದೇಶಕ್ಕೆ ಸ್ಥಳೀಯ ಇಂಧನಗಳ ಮೂಲವಾಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಮಾಜಿ ಪ್ರಧಾನಿ ಶ್ರೀ ಎಚ್ ಡಿ ದೇವೇಗೌಡ ಶ್ಲಾಘಿಸಿದರು. ಹೊಸ ತಂತ್ರಜ್ಞಾನವು ಅಭಿವೃದ್ಧಿಯ ಸನ್ನಿವೇಶವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ನಾವು ಇಂದು ನೋಡುತ್ತಿರುವುದನ್ನು ನಂಬಲಾಗುತ್ತಿಲ್ಲ ಎಂದು ಅವರು ಹೇಳಿದರು.

ಕೇಂದ್ರ ಸಚಿವರು ನೀಡಿದ ಎಲ್ಲ ಸಲಹೆಗಳನ್ನು ಕಾರ್ಯರೂಪಕ್ಕೆ ತರುವುದಾಗಿ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ಅವರು ಭರವಸೆ ನೀಡಿದರು. ತಮ್ಮ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಮತ್ತು ಅದರ ಜನರ ಜೀವನ ಶೈಲಿಯನ್ನು ಹೆಚ್ಚಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು. ತಮ್ಮ ಸರ್ಕಾರದ ಗುರಿಗಳನ್ನು ಸಾಧಿಸಲು ಕೇಂದ್ರದ ಸಹಕಾರದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಕಳೆದ 6 ವರ್ಷಗಳಲ್ಲಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವ ಶ್ರೀ ಸದಾನಂದ ಗೌಡ ವಿವರಿಸಿದರು. ಗೋವಾದಿಂದ ತಿರುವನಂತಪುರಕ್ಕೆ ಕರಾವಳಿ ರಸ್ತೆ ಜಾಲವನ್ನು ಯೋಜಿಸಿದ್ದಕ್ಕಾಗಿ ಶ್ರೀ ಗಡ್ಕರಿ ಅವರನ್ನು ಶ್ಲಾಘಿಸಿದರು.
ಕೇಂದ್ರ ಸಚಿವ ಶ್ರೀ ಪ್ರಹ್ಲಾದ್ ಜೋಶಿ ಅವರು ರಾಷ್ಟ್ರೀಯ ಹೆದ್ದಾರಿ ವಲಯದ ಅಭಿವೃದ್ಧಿ ಕೆಲಸಗಳನ್ನು ಶ್ಲಾಘಿಸಿದರು. ರಸ್ತೆ ಸಂಪರ್ಕವು ಈಗ ಆಹಾರ, ಬಟ್ಟೆ ಮತ್ತು ವಸತಿಯಂತೆಯೇ ಮೂಲಭೂತ ಅವಶ್ಯಕತೆಯಾಗಿದೆ ಎಂದು ಅವರು ಹೇಳಿದರು.
ಸಂಸದ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ಶ್ರೀ ಮಲ್ಲಿಕರ್ಜುನ ಖರ್ಗೆ ಅವರೂ ಸಹ ಶ್ರೀ ನಿತಿನ್ ಗಡ್ಕರಿ ಅವರ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಡಕರಿಯವರು ಅಭಿವೃದ್ಧಿ ಪರ ಎಂದು ಖರ್ಗೆ ಹೇಳಿದರು. ಸಿಆರ್‌ಎಫ್ ಮೊತ್ತವನ್ನು ರಾಜ್ಯದ ಎಲ್ಲಾ ಯೋಜನೆಗಳಿಗೆ ಸಮಾನವಾಗಿ ಬಿಡುಗಡೆ ಮಾಡುವಂತೆ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು.
ಇಂದು ಉದ್ಘಾಟನೆಯಾಗಿರುವ ಯೋಜನೆಗಳು ಕರ್ನಾಟಕದ ಪ್ರಮುಖ ನಗರಗಳ ನಡುವೆ ಉತ್ತಮ ಸಂಪರ್ಕವನ್ನು ಒದಗಿಸುತ್ತವೆ ಎಂದು ರಸ್ತೆ ಸಾರಿಗೆ ಮತ್ತರು ಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ಡಾ ವಿ ಕೆ ಸಿಂಗ್ ಹೇಳಿದರು. ಅಂತರ ರಾಜ್ಯ ಸಂಪರ್ಕವು ವೇಗವಾಗಿರುತ್ತದೆ ಮತ್ತು ಅಡಚಣೆರಹಿತವಾಗಿರುತ್ತದೆ. ಇದು ಕೃಷಿ, ಮೀನುಗಾರಿಕೆ ಮತ್ತು ಆರೋಗ್ಯ ಕ್ಷೇತ್ರಗಳ ಮೇಲೆ ಪರಿವರ್ತನೆಯ ಪರಿಣಾಮ ಬೀರುತ್ತದೆ. ಆರ್ಥಿಕ ಕಾರಿಡಾರ್‌ಗಳು, ವೆಚ್ಚ ಮತ್ತು ದೂರ ಪ್ರದೇಶಗಳ ತ್ವರಿತ ಬೆಳವಣಿಗೆ ಮತ್ತು ಪ್ರಯಾಣಿಕರು ಹಾಗೂ ಸರಕುಗಳ ಸುರಕ್ಷಿತ ಸಂಚಾರವನ್ನು ಸುಧಾರಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ ಎಂದು ಅವರು ಹೇಳಿದರು. ಇದಲ್ಲದೆ, ರಾಷ್ಟ್ರೀಯ ಹೆದ್ದಾರಿ 66 ರ ಅಭಿವೃದ್ಧಿಯು ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಮತ್ತು ಬಂದರುಗಳಿಗೆ ಸಂಪರ್ಕವನ್ನು ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.

image001OGLW
image002A263
image003Y7S6

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: National News, Trending Tagged With: . Gadkari for development, 900 ಕಿ.ಮೀ.ಗಿಂತ ಹೆಚ್ಚಿನ ರಸ್ತೆ, coastal road network, development of road network in the state, economy. ಗಡಕರಿಯವರು ಅಭಿವೃದ್ಧಿ ಪರ, Goa to Trivandrum, Khargha, more than 900 km road, National highway, national highway project, Nitin Gadkari, rice extra, Sugar, TRADE, ಅಕ್ಕಿಯನ್ನು ಹೆಚ್ಚುವರಿ, ಆರ್ಥಿಕತೆಯ ಅನುಕೂಲ, ಕರಾವಳಿ ರಸ್ತೆ ಜಾಲ, ಖರ್ಗೆ, ಗೋವಾದಿಂದ ತಿರುವನಂತಪುರಕ್ಕೆ, ನಿತಿನ್ ಗಡ್ಕರಿ, ರಾಜ್ಯದಲ್ಲಿ ರಸ್ತೆ ಜಾಲವನ್ನು ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಯೋಜನೆ, ವ್ಯಾಪಾರ, ಸಕ್ಕರೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...