• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಿಎಂ ಕಿಸಾನ್ ಯೋಜನೆ ಅಡಿ ಈವರೆಗೆ 1,10,000 ಕೋಟಿ ರೂ.ಗೂ ಅಧಿಕ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ

December 26, 2020 by Sachin Hegde Leave a Comment

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಆಯವ್ಯಯ ಕಳೆದ ಆರು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಳವಾಗಿದೆ ಎದು ಕೇಂದ್ರ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ಎಂ.ಎಸ್.ಪಿ. ದೊರಕಿಸಲು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಜಾರಿ ಮಾಡಿದ್ದಾರೆ ಎಂದೂ ತಿಳಿಸಿದರು.

PM Kisan Samman Nidhi Yojana 2020

ಎಂ.ಎಸ್.ಪಿ. ದರದಲ್ಲಿ ಬೆಳೆ ಖರೀದಿಗೆ ಮಾಡಲಾಗಿರುವ ವೆಚ್ಚ 2009-14ಕ್ಕೆ ಹೋಲಿಸಿದರೆ 2014-19ರಲ್ಲಿ ಶೇ.85ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು. 2013-14ಕ್ಕೆ ಹೋಲಿಸಿದರೆ ಎಲ್ಲ ಪ್ರಮುಖ ಬೆಳೆಗಳಿಗೂ 2020-21ರಲ್ಲಿ ಎಂ.ಎಸ್.ಪಿ. ದರ ಶೇ.40ರಿಂದ 70ರಷ್ಟು ಹೆಚ್ಚಳವಾಗಿದೆ. ಈ ವರ್ಷ ಭತ್ತವನ್ನು ಪಂಜಾಬ್ ರೈತರಿಂದ ಎಂ.ಎಸ್.ಪಿ. ದರದಲ್ಲಿ ಕಳೆದ ವರ್ಷಕ್ಕಿಂತ ಶೇ.25ರಷ್ಟು ಮತ್ತು ಈ ವರ್ಷ ಗುರಿ ಹೊಂದಿದ್ದಕ್ಕಿಂತ ಶೇ.20ರಷ್ಟು ಹೆಚ್ಚು ಖರೀದಿಸಲಾಗಿದೆ ಎಂದು ತಿಳಿಸಿದರು. 1,10,000 ಕೋಟಿ ರೂ.ಗೂ ಅಧಿಕ ಹಣವನ್ನು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಮತ್ತು ಈವರೆಗೆ 17,450 ಕೋಟಿ ರೂ. ವಿಮಾ ಕಂತಿಗೆ ಪ್ರತಿಯಾಗಿ ರೈತರಿಗೆ 87,000 ಕೋಟಿ ರೂ. ವಿಮೆ ರೂಪದಲ್ಲಿ ನೀಡಲಾಗಿದೆ ಎಂದರು.
1950ರಲ್ಲಿ ರಾಷ್ಟ್ರೀಯ ಒಟ್ಟು ಉತ್ಪನ್ನಕ್ಕೆ ಭಾರತದ ಕೃಷಿ ವಲಯ ಶೇ.52ರಷ್ಟು ಕೊಡುಗೆ ನೀಡುತ್ತಿತ್ತು. ಜೊತೆಗೆ ನಮ್ಮ ಒಟ್ಟು ಜನಸಂಖ್ಯೆಯ ಶೇ.70ರಷ್ಟು ಜನರಿಗೆ ಉದ್ಯೋಗ ಕಲ್ಪಿಸಿತ್ತು ಎಂದು ತಿಳಿಸಿದರು. 2019ರಲ್ಲಿ ಈ ವಲಯ ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇ.42ರಷ್ಟು ಜನರಿಗೆ ಉದ್ಯೋಗ ನೀಡಿದೆ ಆದರೆ ಜಿಡಿಪಿಗೆ ಕೇವಲ ಶೇ.16ರಷ್ಟು ಕೊಡುಗೆ ನೀಡಿದೆ. ಜೊತೆಗೆ ವರ್ಷದಿಂದ ವರ್ಷಕ್ಕೆ ವೃದ್ಧಿ ದರ ಕೇವಲ ಶೇ.2ರಷ್ಟು ಎಂದು ತಿಳಿಸಿದರು.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ 2018ರಲ್ಲಿ ನಡೆಸಿದ ಅಧ್ಯಯನದ ಬಗ್ಗೆ ಉಲ್ಲೇಖಿಸಿದ ಅವರು, ಎಲ್ಲ ಕೃಷಿ ಕುಟುಂಬಗಳ ಪೈಕಿ ಶೇ.52.5ರಷ್ಟು ಕುಟುಂಬಗಳು 1,470 ಡಾಲರ್ (1.08 ಲಕ್ಷ) ಸಾಲ ಹೊಂದಿದ್ದಾರೆ ಎಂದು ತಿಳಿಸಿದರು. ಸೂಕ್ತ ಶೀಥಲೀಕರಣ ವ್ಯವಸ್ಥೆ ಇಲ್ಲದ ಕಾರಣ ಶೇ.30ರಷ್ಟು ಕೃಷಿ ಉತ್ಪನ್ನ ವ್ಯರ್ಥವಾಗುತ್ತಿದೆ ಎಂದೂ ತಿಳಿಸಿದರು. ಈ ಅಂಶಗಳು ಅತ್ಯಧಿಕವಾಗಿ ಅಸಮರ್ಥ ಪೂರೈಕೆ ಸರಪಳಿಯನ್ನು ರೂಪಿಸುತ್ತವೆ ಮತ್ತು ಇದರ ಪರಿಣಾಮವಾಗಿ ಗ್ರಾಹಕರಿಗೆ ಉತ್ಪನ್ನಗಳ ಆಯ್ಕೆ ಇಲ್ಲದಂತಾಗುತ್ತದೆ, ವ್ಯರ್ಥ ಹೆಚ್ಚುತ್ತದೆ ಮತ್ತು ಬೆಲೆಗಳು ಹೆಚ್ಚಾಗುತ್ತವೆ ಎಂದು ಅವರು ಹೇಳಿದರು. ಇದೇ ವೇಳೆ, ಭಾರತೀಯ ರೈತರು ಹವಾಮಾನ ವೈಪರೀತ್ಯ, ಮಾರುಕಟ್ಟೆಗಳು, ಮಧ್ಯವರ್ತಿಗಳು ಮತ್ತು ಅಗತ್ಯ ಮೂಲಸೌಕರ್ಯಗಳ ಕೊರತೆಗೆ ಒಳಗಾಗುತ್ತಾರೆ ಎಂದು ಅವರು ಹೇಳಿದರು.
ನಮ್ಮ ರೈತರು ಮುಕ್ತ ಮಾರುಕಟ್ಟೆಯಲ್ಲಿ ತಮ್ಮ ಉತ್ಪನ್ನ ಮಾರಾಟ ಮಾಡಬೇಕು ಎಂದು ಪ್ರಮುಖ ಕೃಷಿ ಆರ್ಥಿಕತಜ್ಞರು ಸಹ ಈ ಸುಧಾರಣೆಗಳನ್ನು ಸಲಹೆ ಮಾಡಿದ್ದರು ಎಂದು ಶ್ರೀ ಪುರಿ ಹೇಳಿದರು. ಭಾರತದ ಕೆಲವು ರಾಜ್ಯಗಳು ಈ ಸುಧಾರಣೆಗಳನ್ನು ತಮ್ಮದೇ ರೀತಿಯಲ್ಲಿ ಹಲವು ವರ್ಷಗಳಿಂದ ಅಳವಡಿಸಿಕೊಂಡು ಜಾರಿ ಮಾಡಿವೆ – ಉದಾಹರಣೆಗೆ ಕೃಷಿ ವೃದ್ಧಿಯ ರಾಷ್ಟ್ರೀಯ ಸರಾಸರಿ ಶೇ.2ರಲ್ಲಿದ್ದರೆ, ಬಿಹಾರದ ವೃದ್ಧಿ ಸರಾಸರಿ ಶೇ.6ರಷ್ಟು ಎಂದು ತಿಳಿಸಿದರು.
ಸರ್ಕಾರ ರೈತರಿಗೆ ಮಾತುಕತೆ ನಡೆಸಿ, ಅವರ ಕಳವಳ ನಿವಾರಿಸಿಕೊಳ್ಳಲು ಪದೇ ಪದೇ ಮನವಿ ಮಾಡಿದೆ ಎಂದು ಶ್ರೀ ಪುರಿ ತಿಳಿಸಿದರು. ರಾಜ್ಯಗಳಿಗೆ ಮಂಡಿಗಳ ಮೇಲೆ ತೆರಿಗೆ ವಿಧಿಸಲು ಅವಕಾಶ ನೀಡಲಾಗಿದೆ, ಆದಾಗ್ಯೂ, ಸರ್ಕಾರ ಕಾಲಮಿತಿಯೊಳಗೆ ವಿವಾದ ಇತ್ಯರ್ಥಪಡಿಸುವ ವ್ಯವಸ್ಥೆಯನ್ನು ಮಾಡಿದೆ, ವಿವಾದದ ಸಂದರ್ಭದಲ್ಲಿ ಸಿವಿಲ್ ನ್ಯಾಯಾಲಯಗಳ ಪ್ರವೇಶಕ್ಕೂ ಸರ್ಕಾರ ಅನುಮತಿ ನೀಡಿದೆ ಎಂದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: National News, Trending, ಕೃಷಿ Tagged With: 000 crore, 000 ಕೋಟಿ ರೂ.ಗೂ ಅಧಿಕ ಹಣ, 1, 10, Cost of Production for Farmers One and half, Lack of infrastructure, MSP. Purchase of Crop at Rate, over Rs 1, Swaminathan Committee recommendation Crop Purchases, ಎಂ.ಎಸ್.ಪಿ. ದರದಲ್ಲಿ ಬೆಳೆ ಖರೀದಿ, ಎಂ.ಎಸ್.ಪಿ. ದರದಲ್ಲಿ ಬೆಳೆ ಖರೀದಿಗೆ, ಮೂಲಸೌಕರ್ಯಗಳ ಕೊರತೆ, ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ, ಸ್ವಾಮಿನಾಥನ್ ಸಮಿತಿಯ ಶಿಫಾರಸು

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...