ಭಟ್ಕಳ:ಆನಂದ ಸಿಂಗ್ ರಾಜೀನಾಮೆ ಹಿನ್ನೆಲೆಯಲ್ಲಿ ಭಟ್ಕಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಕರೆ ಮಾಡಿ ತುರ್ತಾಗಿ ಬೆಂಗಳೂರಿಗೆ ಬರಲು ಹೇಳಿದ್ದಾರೆ .
ತಾಲೂಕಿನ ನೂತನ ಮಿನಿ ವಿಧಾನ ಸೌಧ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಆರ್.ಅಶೋಕವರು ಕಾರ್ಯಕ್ರಮ ಉದ್ದೇಶಿ ಮಾತನಾಡುತ್ತಿರುವ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವ ಕರೆ ಬಂದಿದ್ದು .ತಕ್ಷಣ ಸ್ಟೇಜ್ ನಿಂದ ಕೆಳೆಗಿಳಿದು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು ರಾತ್ರಿಯೊಳಗಾಗಿ ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದಾರೆ. ನಂತರಮಧ್ಯಮದವರೊಂದಿಗೆ ಮಾತನಾಡಿದ ಅವರು ಆನಂದ ಸಿಂಗ್ ರಾಜೀನಾಮೆ ಕೊಟ್ಟಿದ್ದಾರೋ, ಕೊಟ್ಟಿಲ್ಲವೋ ನನಗೆ ಇನ್ನು ಸ್ಪಷ್ಟವಾಗಿ ಗೊತ್ತಾಗಿಲ್ಲ. ಈ ಬಗ್ಗೆ ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಮುಖ್ಯಮಂತ್ರಿಗಳ ಜೊತೆ ಮಾತಾಡುತ್ತೆವೆ. ಅಲ್ಲದೆ ಈ ಬಗ್ಗೆ ಆನಂದಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
Leave a Comment