ಭಟ್ಕಳ : ಕಾರು ಮತ್ತು ಕ್ರೂಸರ್ ನಡುವೆ ನಡೆದ ಮುಖಾ ಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡ ಘಟನೆ ಪಟ್ಟಣದ ನಿಶಾತ ನರ್ಸಿಂಗ್ ಹೋಂ ಬಳಿ ನಡೆದಿದೆ.
ಹೊನ್ನಾವರದಿಂದ ಕುಂದಾಪುರಗೆ ತೆರಳುತ್ತಿದ್ದ ಕಾರು ಕುಂದಾಪುರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹೊನ್ನಾವರದ ಗೌಸಿಯಾ ಬಿಬಿ(32) ಗಂಭಿರ ಗಾಯಗೊಂಡಿದ್ದಾರೆ. ಗಾಯಗೊಂಡ.ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಕಾರಿನಲ್ಲಿದ್ದ ಹೊನ್ನಾವರದ ಬಿಬಿ ಆಯಷಾ, ಅಮೀರುಲ್ಲಾ ಎನ್ನುವರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment