ಹಳಿಯಾಳ:- ಪ್ರಸಕ್ತ ಸಾಲಿನ ಎಸ್.ಎಸ್.ಎಲ್ಸಿ ಫಲಿತಾಂಶ ಗುಣಾತ್ಮಕತೆಯಿಂದ ಕೂಡಿರಬೇಕು ಮತ್ತು ಉತ್ತಮ ಫಲಿತಾಂಶಕ್ಕೆ ಶಿಕ್ಷಕರರು ಈಗಿನಿಂದಲೇ ಪ್ರಯತ್ನಿಸಿ ಎಂದು ಹಳಿಯಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ ಮುಲ್ಲಾ ಶಿಕ್ಷಕರಿಗೆ ಕರೆ ನೀಡಿದರು.
ಹಳಿಯಾಳ ತಾಲೂಕಿನ ಚಿಬ್ಬಲಗೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ತಾಲೂಕಿನ ವಿಜ್ಞಾನ ಶಿಕ್ಷಕರ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಹಳಿಯಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕ ಜೇಮ್ಸ್ ಡಿಸೋಜಾ ಅವರು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ 10ನೇ ತರಗತಿ ಫಲಿತಾಂಶ ಉತ್ತಮಪಡಿಸಲು ಶಿಕ್ಷಕರ ಜವಾಬ್ಧಾರಿಯ ಕುರಿತು ತಿಳಿಸಿದರು.
ಕಾರ್ಯಗಾರದ ಅಧ್ಯಕ್ಷತೆಯನ್ನು ಚಿಬ್ಬಲಗೇರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ನಾಗರಾಜ ಬೇಲಿಫರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಪರಮೇಶ್ವರ ಭಟ್ ಮತ್ತು ವಿನಾಯಕ ಪಟಗಾರ, ಎಸ್ಡಿಎಮ್ಸಿ ಅಧ್ಯಕ್ಷರಾದ ಭೀಮಪ್ಪ ಚೌಗಲಾರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರು ಕಾರ್ಯಗಾರದ ಚಟುವಟಿಕೆಗಳು ಮುಗಿದ ನಂತರ ಚಿಬ್ಬಲಗೇರಿ ಶಾಲೆಯ ಮಕ್ಕಳು ಆಹಾರ ಸರಪಳಿಯ ಕುರಿತಾದ ಸೂತ್ರದ ಗೊಂಬೆಯಾಟವನ್ನು ಪ್ರದರ್ಶಿಸಿದರು. ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಸಿದ್ದಪ್ಪ ಬಿರಾದಾರ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಆರಂಭದಲ್ಲಿ ಚಿಬ್ಬಲಗೇರಿ ಪ್ರೌಢಶಾಲಾ ಮಕ್ಕಳಿಂದ ಪ್ರಾರ್ಥನೆಯೊಂದಿಗೆ ಕಾರ್ಯಗಾರವು ಪ್ರಾರಂಭವಾಯಿತು. ಸಹ ಶಿಕ್ಷಕರಾದ ನಾರಾಯಾಣ ಬಾಬ್ರಿಯವರು ಸರ್ವರನ್ನು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
Leave a Comment