• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ರಾಷ್ಟಿçÃಯ ಶಿಕ್ಷಣ ನೀತಿಯಲ್ಲಿ ಜಾಗತೀಕರಣಕ್ಕೆ ಆದ್ಯತೆ

February 9, 2021 by Vishwanath Shetty Leave a Comment

ಹೊನ್ನಾವರ:ಜಾಗತೀಕರಣ ಹಾಗೂ ಖಾಸಗೀಕರಣದ ದೃಷ್ಟಿಕೋನದೊಂದಿಗೆ ಸ್ಥಳೀಯ ಸಂಪನ್ಮೂಲ ಹಾಗೂ ಮಾನವಶಕ್ತಿಯನ್ನು ಬಳಸಿಕೊಳ್ಳುವುದಕ್ಕೆ ಹೊಸ ರಾಷ್ಟಿçÃಯ ಶಿಕ್ಷಣ ನೀತಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ’

ಎಂದು ದಾಂಡೇಲಿ ಬಂಗೂರನಗರ ಕಾಲೇಜಿನ ಪ್ರಾಧ್ಯಾಪಕ ಹಾಗೂ ಬರಹಗಾರ ಡಾ.ಆರ್.ಜಿ.ಹೆಗಡೆ ಅಭಿಪ್ರಾಯಪಟ್ಟರು.
ಇಲ್ಲಿಯ ಎಸ್.ಡಿ.ಎಂ.ಕಾಲೇಜಿನ ಐಐಸಿ ಹಾಗೂ ಐಕ್ಯುಎಸಿ ಸಹಯೋಗದಲ್ಲಿ ರಾಷ್ಟಿçÃಯ ಶಿಕ್ಷಣ ನೀತಿಯ ಕುರಿತು ಸೋಮವಾರ ನಡೆದ ಓರಿಯೆಂಟೇಶನ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ,ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
‘ಯರೋಪಿನ ದೇಶಗಳಿಗಿಂತ ಭಾರತ ಹಿಂದುಳಿಯಲು ಇಲ್ಲಿನ ಶಿಕ್ಷಣ ವ್ಯವಸ್ಥೆಯಲ್ಲಿನ ದೋಷಗಳು ಕಾರಣ.೧೯೮೩,೧೯೮೬ ಹಾಗೂ ೨೦೦೯ರಲ್ಲಿ ಜಾರಿಗೆ ತರಲಾಗಿದ್ದ ಶಿಕ್ಷಣ ನೀತಿಗಳು ಆಯಾ ಕಾಲದ ಅಗತ್ಯಗಳಿಗೆ ಅನುಗುಣವಾಗಿದ್ದವು.ಇತ್ತೀಚಿನ ವರ್ಷಗಳಲ್ಲಿ ವಿವಿಧ ಕ್ಷೇತ್ರಗಳ್ಲಿ ಹಲವು ಕ್ರಾಂತಿಕಾರಕ ಬದಲಾವಣೆಗಳಾಗಿದ್ದು ಶಿಕ್ಷಣ ವ್ಯವಸ್ಥೆಯಲ್ಲಿನ ಮಾರ್ಪಾಟು ಅನಿವಾರ್ಯವಾಗಿದೆ’ ಎಂದು ಅವರು ಹೇಳಿದರು.


ಯುಜಿಸಿ,ವಿಶ್ವವಿದ್ಯಾಲಯ ಹಾಗೂ ಸರ್ಕಾರದ ನೀತಿ ನಿರ್ಧಾರಗಳ ನಡುವಿನ ಸಾಮ್ಯತೆಯ ಕೊರತೆಯಿಂದ ಶಿಕ್ಷಣ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದ್ದು ಹೊಸ ಶಿಕ್ಷಣ ನೀತಿಯಲ್ಲಿ ಈ ನಿಟ್ಟಿನಲ್ಲಿ ಬದಲಾವಣೆಯ ಚಿಂತನೆಗಳಿವೆ.ಅನುಭವ,ಕೌಶಲ್ಯ ಹಾಗೂ ಪ್ರಾದೇಶಿಕ ಸಂಸ್ಕೃತಿಯನ್ನು ಕಲಿಕೆಯಲ್ಲಿ ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು ಮುಂದಿನ ಜೀವನಕ್ಕೆ ಅಣಿಗೊಳಿಸುವ ಉದ್ದೇಶ ಹೊಸ ಶಿಕ್ಷಣ ನೀತಿಯಲ್ಲಿ ಅಡಗಿದೆ’ ಎಂದು ಅವರು ವಿವರಿಸಿದರು.
ಐಕ್ಯುಎಸಿ ಸಂಯೋಜಕ ಡಾ.ಪಿ.ಎಂ.ಹೊನ್ನಾವರ,ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯೆ ಡಾ.ವಿಜಯಲಕ್ಷಿö್ಮ ಎಂ.ನಾಯ್ಕ ಮಾತನಾಡಿದರು.
ಐಐಸಿ ಸಂಯೋಜಕ ಡಾ.ವಿ.ಎಂ.ಭAಡಾರಿ ಸ್ವಾಗತಿಸಿದರು.ಪ್ರೊ.ಎಂ.ಜಿ.ಹೆಗಡೆ,ಪ್ರೊ.ಸುರೇಶ ಎಸ್. ನಿರೂಪಿಸಿದರು.ಡಾ.ಡಿ.ಎಲ್.ಹೆಬ್ಬಾರ ವಂದಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಓರಿಯೆಂಟೇಶನ್ ಕಾರ್ಯಕ್ರಮದ ಉದ್ಘಾಟನೆ, ಖಾಸಗೀಕರಣದ ದೃಷ್ಟಿಕೋನ, ಮಾನವಶಕ್ತಿ, ಯರೋಪಿನ ದೇಶ, ಸಂಪನ್ಮೂಲ

Explore More:

Vishwanath Shetty

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 964,572 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !

April 17, 2021 By Vishwanath Shetty

ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ

April 17, 2021 By Vishwanath Shetty

ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ

April 17, 2021 By Vishwanath Shetty

ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ

April 17, 2021 By Vishwanath Shetty

08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

April 16, 2021 By Vishwanath Shetty

ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

April 16, 2021 By deepika

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.