• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮುಖ್ಯ ಚುನಾವಣಾ ಆಯುಕ್ತರಿಂದ ಬುಡಕಟ್ಟು ಸಮುದಾಯ ಇರುವ ಗರಡೊಳ್ಳಿ ಗ್ರಾಮಕ್ಕೆ ಖುದ್ದು ಭೇಟಿ.

February 10, 2021 by Yogaraj SK Leave a Comment

ಹಳಿಯಾಳ :-  ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂಜೀವ್ ಕುಮಾರ್, ಭಾಆಸೇ ರವರು ಹಳಿಯಾಳ ತಾಲೂಕು ಸಾಂಬ್ರಾಣಿ ಹೋಬಳಿಯಲ್ಲಿರುವ ಬುಡಕಟ್ಟು ಸಮುದಾಯವಿರುವ ಗ್ರಾಮವಾದ ಗರಡೊಳ್ಳಿಗೆ  ಭೇಟಿಯನ್ನ ನೀಡಿ,  ಮುಖ್ಯ ಚುನಾವಣಾಧಿಕಾರಿಯಾಗಿ ಮೊದಲ ಭಾರಿಗೆ ಖುದ್ದು ಪರಿಶೀಲನೆಯನ್ನು ನಡೆಸಿದರು.

IMG 20210210 WA0095

 
ಸದರಿ ಗ್ರಾಮದ ಮತದಾರರ ಜೊತೆಗೆ ಬೆರೆತು ಅವರ ಅಹವಾಲುಗಳನ್ನು ಸ್ವೀಕರಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದೆಯೋ ಇಲ್ಲವೋ ಎಂಬುವುದರ ಬಗ್ಗೆ ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದರು. 
ವಿಶೇಷ ಪರಿಶೀಲನೆಯಲ್ಲಿ ಹೆಸರು ಸೇರ್ಪಡೆ, ಯುವ ಮತದಾರರ ಹೆಸರು ನೋಂದಣಿ, PWD ಮತದಾರರ ಸೇರ್ಪಡೆ ಬಗ್ಗೆ ಕೂಲಂಕುಷವಾಗಿ ವೀಕ್ಷಿಸಿದರು. ಇದಾದ ನಂತರ ಗ್ರಾಮದ ಜನರಿಗೆ ತಿಳುವಳಿಕೆ ಹಾಗೂ ಚುನಾವಣಾ ಮಹತ್ವವನ್ನು ತಿಳಿಸುತ್ತಾ, ತಾವು ಬುಡಕಟ್ಟು ಜನಾಂಗಕ್ಕೆ ಸೇರಿರುತ್ತೀರಿ, ಯಾವುದೇ ಕಾರಣಕ್ಕೆ ಹಿಂದುಳಿಯದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತಾವು ಬರಬೇಕು. ಈ ನಿಟ್ಟಿನಲ್ಲಿ ಮತದಾನದ ಪ್ರಕ್ರಿಯೆಯಲ್ಲಿ ತಾವೆಲ್ಲರೂ ಭಾಗವಹಿಸುವುದರ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಕೆಲಸವು ಆಗಬೇಕಾಗಿದೆ ಎಂಬುವುದು ನಮ್ಮ ಆಶಯವಾಗಿರುವುದರಿಂದ  ಸ್ವತಃ ನಾನು ಇವತ್ತು ಖುದ್ದು ಈ ಹಳ್ಳಿಗೆ ಭೇಟಿಯನ್ನು ನೀಡಿ ಹೆಸರು ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿರುತ್ತೇನೆ. ಹಾಗೂ ನಿಮ್ಮ ಜೊತೆಗೆ ಬೆರತ್ತಿದ್ದು ನನಗೆ ಅತೀವ ಸಂತೋಷವಾಗಿರುತ್ತದೆ ಎಂದು ತಿಳಿಸಿರುತ್ತಾರೆ.

IMG 20210210 WA0096

  ಮುಖ್ಯ ಚುನಾವಣಾಧಿಕಾರಿಗಳೊಂದಿಗೆ, ಜಿಲ್ಲಾಧಿಕಾರಿಗಳು ಡಾ. ಹರೀಷ್ ಕುಮಾರ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಸಹಿತ ಹಾಜರಿದ್ದು ಮಾಹಿತಿಯನ್ನು ನೀಡಿದರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬುಡಕಟ್ಟು ಸಮುದಾಯವಿರುವ ಗರಡೊಳ್ಳಿ ಗ್ರಾಮ ಸುಮಾರು 80 ಮನೆಗಳನ್ನು ಹೊಂದಿದ್ದು, ಸುಮಾರು 150 ಕ್ಕೂ ಅಧಿಕ ಮತದಾರರನ್ನು ಹೊಂದಿದ ಗ್ರಾಮವಾಗಿದೆ. ಇಂತಹ ಹಿಂದುಳಿದ ಬುಡಕಟ್ಟು ಗ್ರಾಮಕ್ಕೆ ರಾಜ್ಯದ ಒಬ್ಬ ಮುಖ್ಯ ಚುನಾವಣಾಧಿಕಾರಿಯಾಗಿ ಮೊದಲ ಭಾರಿಗೆ ಭೇಟಿ ನೀಡಿರುವುದು ವಿಶೇಷವಾದ ಸಂಗತಿಯಾಗಿದೆ.

IMG 20210210 WA0098
IMG 20210210 WA0097

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News, Trending

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...