ಹೊನ್ನಾವರ : ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಪ್ರಥಮ ವರ್ಷದ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಓರಿಯಂಟೇಶನ್ ಕಾರ್ಯಕ್ರಮ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಸುಮಂಗಲಾ ನಾಯ್ಕ ಮಾತನಾಡಿ ಗ್ರಾಮೀಣ ಭಾಗದ
ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಒದಗಿಸಬೇಕೇಂಬ ಮಹತ್ವಾಕಾಂಕ್ಷೆಯಿಂದ ಬಿ,ಬಿ,ಎ ವಿಭಾಗವನ್ನು 2007ರಲ್ಲಿ ಆರಂಭಿಸಲಾಗಿದೆ.ಈ ಸುದೀರ್ಘ 13ವರ್ಷಗಳಲ್ಲಿ ಹಲವಾರು ವಿದ್ಯಾರ್ಥಿಗಳು ಬಿ.ಬಿ.ಎ ಪದವಿ ಪಡೆದು ಇಂದು ಸರ್ಕಾರಿ ಮತ್ತು ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕಾಲೇಜಿನ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು. ಕಾಲೇಜಿನ ಮೂಲಭೂತ ಸೌಕರ್ಯಗಳ ಬಗ್ಗೆ ಮಾತನಾಡುತ್ತಾ ಈಗಾಗಲೆ ಸುಸಜ್ಜಿತವಾದ ಕೋಠಡಿಗಳು, ಸಭಾಂಗಣಗಳನ್ನು ಕಾಲೇಜು ಹೊಂದಿದ್ದು ಇನ್ನು ಹೆಚ್ಚಿನ ಅಭಿವೃದ್ಧಿಗೆ ಪ್ರಯತ್ನಿಸುವುದಾಗಿ ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರಾದ ನಾಗೇಶ ಶೆಟ್ಟಿ, ಗ್ರಂಥಪಾಲಕರಾದ ಕಾಳಾನಾಯ್ಕ ಮತ್ತು ಕಛೇರಿ ಅಧೀಕ್ಷಕರಾದ ಶಂಕರ ದೇವಾಡಿಗ ಉಪಸ್ಥಿತರಿದ್ದರು.ವಿಭಾಗದ ಉಪನ್ಯಾಸಕರಾದ ಕುಮಾರ ನಾಯ್ಕ ಮತ್ತು ಪ್ರವೀಣರಾಜ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಮ್ಯಾನಜಮೇಂಟ್ ವಿಭಾಗದ ಮುಖ್ಯಸ್ಥ ವಿಶ್ವನಾಥ ನಾಯ್ಕ ಪ್ರಾಸ್ತವಿಕವಾಗಿ ಮಾತನಾಡಿದರು.ಶರಾವತಿ ಗೌಡ ಕಾರ್ಯಕ್ರಮ ನಿರ್ವಹಿಸಿದರು.
Leave a Comment