• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

24 ಬುಧವಾರದಂದು ಜಿಲ್ಲೆಯಾದ್ಯಂತ ಮೀನುಗಾರರ ಪ್ರತಿಭಟನೆ

February 23, 2021 by Sachin Hegde Leave a Comment

ಹೊನ್ನಾವರ ಕಾಸರಕೋಡ ಟೊಂಕದಲ್ಲಿ ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಹೈದರಾಬಾದ್ ಮೂಲದ ಖಾಸಗಿ ಕಂಪೆನಿಯವರಿಗೆ ಬ್ರಹತ್ ವಾಣಿಜ್ಯ ಬಂದರು ನಿರ್ಮಾಣ ಮಾಡಲು ಅವಕಾಶಮಾಡಿಕೊಟ್ಟಿರುವದನ್ನು  ವಿರೋಧಿಸಿ 24 ಬುಧವಾರದಂದು ಜಿಲ್ಲೆಯ ಮೀನುಗಾರರು ಜಿಲ್ಲೆಯಾದ್ಯಂತ ಮೀನುಗಾರಿಕೆಯನ್ನು ಬಂದ್ ಮಾಡಿ ಎಲ್ಲರೂ ಅಂದು ಮುಂಜಾನೆ 10 ಘಂಟೆಗೆ ಹೊನ್ನಾವರದಲ್ಲಿ ನಡೆಯುವ ಮೀನುಗಾರರ ಪ್ರತಿಭಟನೆಯಲ್ಲಿ ಭಾಗವಹಿಸಿಸುವಂತೆ ಜಿಲ್ಲೆಯ ಮೀನುಗಾರರಿಗೆ ರಾಷ್ಟ್ರೀಯ ಮೀನುಗಾರರ ಸಂಘಟನೆಯು ಕರೆನೀಡಿದೆ. 

IMG 20210223 WA0096

ಈ ಸಂಬಂದವಾಗಿ ಸಂಘಟನೆಯ  ರಾಜ್ಯ ಕಾರ್ಯದರ್ಶಿಗಳಾದ ಚಂದ್ರಕಾಂತ ಕೊಚರೇಕರ,ಮತ್ತು ಜಂಟಿ ಕಾರ್ಯದರ್ಶಿ ಅಜೀತ ತಾಂಡೇಲ್,  ಪತ್ರಿಕಾ ಪ್ರಕಟಣೆ ನೀಡಿ, ಸ್ಥಳೀಯರ ತೀವ್ರ ವಿರೋಧದ ನಡುವೆಯೂ, ಅಭಿವೃದ್ಧಿಯ ನೆಪದಲ್ಲಿ – ಸ್ಥಳೀಯ ಪರಿಸರಕ್ಕೆ,ಜನರ ಆರೋಗ್ಯಕ್ಕೆ, ಮೀನುಗಾರಿಕೆಗೆ, ಮೀನುಗಾರರ ವ್ರತ್ತಿ ಬದುಕಿಗೆ, ಮೀನಿನ ಸಂತತಿ ಮತ್ತು ಜೀವವೈವಿಧ್ಯತೆಗೆ ಮಾರಕವಾಗಬಲ್ಲ ಹೊನ್ನಾವರ ಕಾಸರಕೋಡ ಟೊಂಕದಲ್ಲಿ ನಿರ್ಮಿಸಲಾಗುತ್ತಿರುವ ಹೈದರಾಬಾದ್ ಮೂಲದ ಖಾಸಗಿ ಕಂಪೆನಿಯ ಬ್ರಹತ್ ವಾಣಿಜ್ಯ ಬಂದರು ಯೋಜನೆಯನ್ನು ಸ್ಥಳೀಯರ ಮತ್ತು ಮೀನುಗಾರಿಕೆಯ ಸಮಗ್ರ ಹಿತದೃಷ್ಟಿಯಿಂದ ಕೂಡಲೇ  ಕೈಬಿಡುವಂತೆ ಸಂಘಟನೆಯ ರಾಜ್ಯ ಪದಾಧಿಕಾರಿಗಳ ನಿಯೋಗವು ಇತ್ತೀಚೆಗೆ ರಾಜ್ಯದ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳರನ್ನು ಭೇಟಿ ಮಾಡಿ ಸರ್ಕಾರದ ಗಮನ ಸೆಳೆದಿದೆ. .ಸ್ಥಳೀಯ ಹೋರಾಟ ಸಮಿತಿಯು ತಾಲ್ಲೂಕು/ಜಿಲ್ಲಾ ಆಡಳಿತದ ಮೂಲಕ ಮತ್ತು ಜನಪ್ರತಿನಿಧಿಗಳ ಮೂಲಕವೂ ಸಹ ಸಾಕಷ್ಟು ಬಾರಿ ಸರ್ಕಾರದ ಗಮನ ಸೆಳೆದಿದೆ .

IMG 20210223 WA0095

ಆದರೂ ಸರ್ಕಾರ ಈವರೆಗೆ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯಲು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ರಾಜ್ಯ ಸಮಿತಿ  ಅಸಮಾಧಾನ ವ್ಯಕ್ತಪಡಿಸಿದೆ. ಸಂಘನೆಯ ರಾಜ್ಯ ಸಮೀತಿಯು ಇತ್ತೀಚೆಗೆ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಚೌಧರಿಯವರ ಅಧ್ಯಕ್ಷತೆಯಲ್ಲಿ  ಸಭೆ ಸೇರಿ ಕಾಸರಕೋಡ ಟೊಂಕದಲ್ಲಿ ನಿರ್ಮಿಸಲಾಗುತ್ತಿರುವ ಖಾಸಗಿ ಮೂಲದ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ತಡೆಯುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮೀನಮೇಷ ಮಾಡುತ್ತಿದ್ದಾರೆ.  ಸರ್ಕಾರಕ್ಕೆ ಇಲ್ಲಿನ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುವಲ್ಲಿನ ಜನಪ್ರತಿನಿಧಿಗಳ ವೈಫಲ್ಯವೇ  ಸ್ಥಳೀಯರನ್ನು ಹೋರಾಟಕ್ಕೆ  ಇಳಿಯುವಂತೆಮಾಡಿದೆ ಮತ್ತು , ಸ್ಥಳೀಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಅಂದೇ ನಮ್ಮ ಸಂಘಟನೆಯ ಪದಾಧಿಕಾರಿಗಳ ನಿಯೋಗವು ರಾಜಧಾನಿಯಲ್ಲಿ ಸರ್ಕಾರದ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಖಾಸಗಿ ಬಂದರು ನಿರ್ಮಾಣ ಯೋಜನೆಯನ್ನು ಕೈಬಿಡುವಂತೆ ಆಗ್ರಹಪಡಿಸಿದೆ ಹಾಗೂ ಸ್ಥಳೀಯ ಮೀನುಗಾರ ಮಹಿಳೆಯರು ಇಲ್ಲಿಯ ಬಂದರು ನಿರ್ಮಾಣ ಕಾಮಗಾರಿಯನ್ನು ತಡೆದು ಕಳೆದ 15ದಿವಸಗಳಿಂದ ಕಾಮಗಾರಿಸ್ಥಳದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಿಚಾರವನ್ನು ಸಹ ಗಮನಕ್ಕೆ ತರಲಾಗಿದೆ. ಆದರೆ ಈ ನಡುವೆ ಬಂದರು ಯೋಜನೆಯನ್ನು ಕೈಬಿಡುವ ಸಾಧ್ಯತೆಗಳನ್ನು ಪರಿಶೀಲನೆ ಮಾಡುವ ಬದಲಿಗೆ, ಕೆಲವು ಅಧಿಕಾರಿಗಳು ಕಂಪೆನಿ ಪರವಾಗಿ ಕಾಮಗಾರಿ ನಡೆಸಲು ಆತುರಪಡಿಸುತ್ತಿರುವುದನ್ನು ಮತ್ತು ಸ್ಥಳೀಯರ ಚಳವಳಿಯನ್ನು ಹತ್ತಿಕ್ಕಲು  ನಡೆಯುತ್ತಿರುವ ಒಳಸಂಚಿನ ಕುರಿತಾಗಿಯೂ ಸಹ  ರಾಷ್ಟ್ರೀಯ ಮೀನುಗಾರರ ಸಂಘಟನೆ ಗಂಭೀರವಾಗಿ ಪರಿಗಣಿಸಿದೆ.ಮೀನುಗಾರರ ವ್ರತ್ತಿಯೇ ತ್ಯಾಗ,ಮತ್ತು ಧೈರ್ಯದ ಪ್ರತೀಕವಾದದ್ದು. ಅವರ,ಸಹನೆ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವುದೇ ರೀತಿಯ ಪ್ರಯತ್ನವನ್ನು ನಮ್ಮ ಸಂಘಟನೆ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ 24ರಂದು ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರರು ಮೀನುಗಾರಿಕೆಯನ್ನು ಬಂದ್ ಮಾಡಿ ಹೊನ್ನಾವರದಲ್ಲಿ ಆಯೋಜಿಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದೇವೆ. ಬಂದರು ಯೋಜನೆಯನ್ನು ಸರ್ಕಾರ ಕೈಬಿಡುವ ವರೆಗೂ ಸ್ಥಳೀಯರ ಬೆಂಬಲಕ್ಕೆ ನಿಲ್ಲುವ ನಿರ್ಧಾರಕ್ಕೆ ನಮ್ಮ ಸಂಘಟನೆ ಬಂದಿದೆ ಎಂದಿದ್ದಾರೆ. ಅಗತ್ಯ ಬಿದ್ದರೆ ಈ ಹೊರಾಟವನ್ನು ರಾಜ್ಯಾದ್ಯಂತ ವಿಸ್ತರಿಸಿ ಹೋರಾಟ ಸಮಿತಿಗೆ ಬೆಂಬಲವಾಗಿ ನಿಲ್ಲುತ್ತೇವೆ ಮತ್ತು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಯು.ಆರ್.ಸಭಾಪತಿ ಸೇರಿದಂತೆ ರಾಜ್ಯ ಸಂಘಟನೆಯ ಅಧ್ಯಕ್ಷರು, ಕಾರ್ಯಾಧ್ಯಕ್ಷರೂ ಸಹಿತ ಎಲ್ಲರೂ ದಿನಾಂಕ 24ರಂದು ಹೊನ್ನಾವರದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ  ಪಾಲ್ಗೊಳ್ಳುವದಾಗಿ ತಿಳಿಸಿ ಹೊನ್ನಾವರದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ಮೀನುಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕೇಂದು ಅವರು ಕೋರಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, Other Tagged With: ಅಭಿವೃದ್ಧಿಯ ನೆಪದಲ್ಲಿ - ಸ್ಥಳೀಯ ಪರಿಸರಕ್ಕೆ, ಖಾಸಗಿ ಕಂಪೆನಿ, ಜನರ ಆರೋಗ್ಯಕ್ಕೆ, ಮೀನಿನ ಸಂತತಿ ಮತ್ತು ಜೀವವೈವಿಧ್ಯತೆಗೆ ಮಾರಕ, ಮೀನುಗಾರರ ವ್ರತ್ತಿ ಬದುಕಿಗೆ, ಮೀನುಗಾರಿಕೆ, ಮೀನುಗಾರಿಕೆಗೆ, ಸಹನೆ ಮತ್ತು ಸ್ವಾಭಿಮಾನಕ್ಕೆ ಧಕ್ಕೆ, ಹೈದರಾಬಾದ್ ಮೂಲದ ಖಾಸಗಿ ಕಂಪೆನಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...