• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾರಿಗೆ ಬಸ್ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ

February 27, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಮಾವಿನಕುರ್ವಾ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಬಿಡುತ್ತಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಆ ಭಾಗದ ವಿದ್ಯಾರ್ಥಿಗಳು ಸಮಸ್ಯೆ ಬಗೆಹರಿಸುವಂತೆ ತಾಲೂಕಾ ದಂಡಾದಿಕಾರಿಗಳ ಮೂಲಕ ನಿಯಂತ್ರಣಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

IMG 20210226 WA0059

ಇಗಾಗಲೇ ಶಾಲೆ ಕಾಲೇಜು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದು ಲಾಕ್‌ಡೌನ್ ಪೂರ್ವದಲ್ಲಿ ನಮ್ಮ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇತ್ತು. ನಂತರ ಶಾಲಾ ಕಾಲೇಜು ಇರದೆ ಇರುವುದರಿಂದ ಅಷ್ಟೊಂದು ಸಮಸ್ಯೆ ಆಗುತ್ತಿರಲಿಲ್ಲ. ಇದೀಗ ಕಾಲೇಜು ಆರಂಭಗೊAಡಿದ್ದು, ಪಟ್ಟಣದ ಕಾಲೇಜಿಗೆ ಬರಲು ಬಸ್ ವ್ಯವಸ್ಥಡ ತೀರಾ ಅಗತ್ಯವಾಗಿದೆ. ಬೆಳಿಗಿನ ಸಮಯದಲ್ಲಿ ಬಸ್ ಇರದೇ ಇರುದರಿಂದ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಈ ಹಿಂದಿನAತೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಹಶಿಲ್ದಾರ ಮೂಲಕ ವಿಭಾಗದ ನಿಯಂತ್ರಣಾಧಿಕಾರಿ ಯವರಿಗೆ ಮನವಿ ಸಲ್ಲಿಸಿದರು.
ದಂಡಾಧಿಕಾರಿ ವಿವೇಕ್ ಶೇಣ್ವಿ ಮನವಿ ಸ್ವಿಕರಿಸಿದರು.
ಕಾಲೇಜು ವಿದ್ಯಾರ್ಥಿ ಗಣೇಶ ಗೌಡ ಮಾತನಾಡಿ ಲಾಕ್‌ಡೌನ್ ಪೂರ್ವದಲ್ಲಿ ಬಸ್ ವ್ಯವಸ್ಥೆ ಸರಿಯಾಗಿತ್ತು. ತಾಲೂಕ ಕೇಂದ್ರದಲ್ಲಿರುವ ಕಾಲೇಜಿಗೆ ಬರಲು ಬಸ್ ತೀರಾ ಅಗತ್ಯವಿರುವ ಗ್ರಾಮದಲ್ಲಿ ನಮ್ಮ ಗ್ರಾಮವು ಒಂದಾಗಿದೆ. ಬಸ್ ಇಲ್ಲದೆ ಪ್ರತಿನಿತ್ಯ ಬೆಳಗಿನ ಅವಧಿಯ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸಮಸ್ಯೆ ಮನಗಂಡು ಈ ಹಿಂದಿನAತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.
ಕ ರ ವೆ ಹೊನ್ನಾವರ ತಾಲೂಕಾ ಅಧ್ಯಕ್ಷ ಮಂಜುನಾಥ ಗೌಡ ಮಾತನಾಡಿ ಗ್ರಾಮಿಣ ಭಾಗದಲ್ಲಿ ಬಸ್ ಸಂಚಾರ ಸರಿಯಾಗಿ ಇಲ್ಲದೆ ಹಲವು ಗ್ರಾಮದ ವಿದ್ಯಾರ್ಥಿಗಳು ತರಗತಿಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು ಪಟ್ಟಣಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದವರ ಬಗ್ಗೆ ಮತ್ತು ವಿದ್ಯಾರ್ಥಿಗಳ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳು ಕಾಳಜಿ ವಹಿಸುತ್ತಿಲ್ಲಾ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಇದೆ ರೀತಿ ಮುಂದುವರಿದರೆ ವಿದ್ಯಾರ್ಥಿಗಳ ನೇತ್ರತ್ವದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಮನೋಜ ನಾಯ್ಕ, ಭರತ್, ವಿನಯ, ಮನೋಜ ಗೌಡ, ಮತ್ತಿತರರು ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, Trending Tagged With: bus system to get to town college, pre-lockdown, problem for college students, Unable to attend class, ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ, ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ, ಪಟ್ಟಣದ ಕಾಲೇಜಿಗೆ ಬರಲು ಬಸ್ ವ್ಯವಸ್ಥಡ ತೀರಾ ಅಗತ್ಯ, ಲಾಕ್‌ಡೌನ್ ಪೂರ್ವ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...