ಹೊನ್ನಾವರ: ಕರ್ನಾಟಕ ಕ್ರಾಂತಿರAಗ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವ ಹಾಗೂ ಜಿಲ್ಲಾಮಟ್ಟದ ಹಗ್ಗಜಗ್ಗಾಟ ಕಾರ್ಯಕ್ರಮ ಹಿರಿಯ ಪ್ರಾಥಮಿಕ ಶಾಲೆ ದರ್ಬೆಜಡ್ಡಿಯಲ್ಲಿ ಇಂದು ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಲಿದ್ದು, ಕ್ರಾಂತಿರAಗ ಸಂಘಟನೆಯ ರಾಜ್ಯಧ್ಯಕ್ಷರಾದ ಮಂಚೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ತಹಶೀಲ್ದಾರ ವಿವೇಕ ಶೇಣ್ವಿ, ಸಿ.ಪಿ.ಐ ಶ್ರೀಧರ ಎಸ್.ಆರ್, ಚಲನಚಿತ್ರ ನಿರ್ಮಾಪಕರಾದ ಸುಬ್ರಾಯ ವಾಳ್ಕೆ, ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ, ಉದ್ಯಮಿಗಳಾದ ರವಿಕುಮಾರ ಶೆಟ್ಟಿ, ಜಿ.ಜಿ.ಶಂಕರ್, ಸೂರಜ್ ನಾಯ್ಕ ಸೋನಿ, ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಜಿಲ್ಲಾಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆ ತಿಳಿಸಿದ್ದಾರೆ.
Leave a Comment