ಭಟ್ಕಳ: ಮುರ್ಡೇಶ್ವರದ ಸಮುದ್ರದಲ್ಲಿ ಬಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಬಟ್ಟಾಂಳ ತಾಲ್ಲೂಕಿನ ಕೊಡ್ತಾಳು ನಿವಾಸಿ ಎ.ಕೆ. ಮುನೀರ್ ಕುಂಜ್ಞ ಮರಾಠಿ (35) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಫೆ.23ರಂದು ಅವರು ಕುಟುಂಬದ ಸದಸ್ಯರೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದರು. ಸಮುದ್ರದಲ್ಲಿ ದಡದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನಲ್ಲಿ ದಾಖಲಿಸಲಾಗಿತ್ತು. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment