ಹೊನ್ನಾವರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತರ ಸಂಘದ ವತಿಯಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ದಂಡಿನದುರ್ಗಾ ಸಭಾ ಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆಯರು ಶಿಕ್ಷಣ ಮತ್ತು ರಾಜಕಿಯ ಸೇರಿದಂತೆ ಎಲ್ಲಾ ಕ್ಷೇತದಲ್ಲಿಯೂ ಸಾಧನೆಯನ್ನು ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಆದರೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು ಅತ್ಯಾಚಾರದಂತಹ ಹೀನ ಕೃತ್ಯಗಳು ಇಂದಿಗೂ ಕಂಡುಬರುತ್ತಿದೆ. ಇಂತಹ ಪ್ರಕರಣಗಳು ನಡೆದಾಗ ಕಠಿಣ ಶಿಕಿಷೆ ನೀಡಬೇಕಿದೆ. ಆಗ ಮಾತ್ರ ಮಹಿಳೆಯರಿಗೆ ರಕ್ಷಣೆ ಸಾಧ್ಯ ಎಂದರು.
ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಡತೋಕಾ ಮಾತನಾಡಿ ಇಂದು ಮಹಿಳೆ ಕೇವಲ ಅಡುಗೆಮನೆಗೆ ಸೀಮಿತವಾಗದೇ, ಎಲ್ಲ ರಂಗದಲ್ಲಿಯೂ ಸಮರ್ಥವಾಗಿ ಮುನ್ನಡೆಯುತ್ತಿದ್ದಾರೆ. ರಾಜಕೀಯವಾಗಿ ೫೦% ಮೀಸಲಾತಿಯಿಂದ ಹೆಚ್ಚಿನವರು ಪಂಚಾಯತಿಯಿAದ ಲೋಕಸಭೆಯವರೆಗೂ ಅಧಿಕಾರ ನಡೆಸುತ್ತಿದ್ದಾರೆ. ಅಂಗನವಾಡಿ ನೌಕರರು ಕಡಿಮೆ ಸಂಬಳದಲ್ಲಿ ಉದ್ಯೋಗ ಭದ್ರತೆ ಇಲ್ಲದೇ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಧ್ವನಿ ಎತ್ತೋಣ ಎಂದರು
ಪೌರ ಕಾರ್ಮಿಕರಾದ ಕಮಲಾ ಹಳ್ಳೇರ, ಅಂಗನವಾಡಿ ಕಾರ್ಯಕರ್ತೆಯರಾದ ಅನಿತಾ ಶೆಟ್, ಮಮತಾ ಶೆಟ್ಟಿ, ಜ್ಯೋತಿ ನಾಯ್ಕ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಡಾ. ಪ್ರೀತಿ ಕುಲಕರ್ಣೆ ಮಹಿಳೆ ಎದುರಿಸುವ ಸವಾಲು ಹಾಗೂ ಸಮಾಜಕ್ಕೆ ಮಹಿಳೆಯ ಕೊಡುಗೆಯ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ ಸದಸ್ಯೆ ಪುಷ್ಪಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ಶಿವರಾಜ ಮೇಸ್ತ, ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಕಲಾ ಶಾಸ್ತಿç, ಶಿಶು ಅಭಿವೃದ್ದಿ ಯೋಜನಾಧಿಕಾರಿ ವಿರುಪಾಕ್ಷಪ್ಪ ಪಾಟೀಲ್,ಸುಲೋಚನಾ, ಸಾಧನಾ ಬರ್ಗಿ, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆಯರಾದ ಚಂದ್ರಿಕಾಶೆಟ್ಟಿ ಸ್ವಾಗತಿಸಿ ಸಾವಿತ್ರಿ ವಂದಿಸಿದರು. ಯುವಜನ ಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
Leave a Comment