ಹೊನ್ನಾವರ: ಕಲಾಶ್ರೀ ಯಕ್ಷಮಿತ್ರ ಮಂಡಳಿ ಹುಡಗೋಡ ಇದನ್ನು ಸ್ಥಾಪಿಸಿ, ಯಕ್ಷಗಾನದ ಪ್ರದರ್ಶನದ ವೇಳೆಯಲ್ಲಿ ಇಹಲೋಕ ತೊರೆದ ಚಂದ್ರಹಾಸ ಹುಡಗೋಡ ಇವರ ದ್ವೀತಿಯ ವರ್ಷದ ಪುಣ್ಯಸ್ಮರಣೆ ನಾಳೆ ಬುಧವಾರ ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಸಂಜೆ ೫ ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ಸುನೀಲ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ, ಸೇಪ್ ಸ್ಟಾರ್ ಮ್ಯಾನೇಜಿಂಗ್ ಡೈರಕ್ಟರ್ ಜಿ.ಜಿ.ಶಂಕರ್, ಹಿರಿಯ ಪತ್ರಕರ್ತರಾದ ಜಿ.ಯು.ಭಟ್, ಎಸ್.ಜಿ.ಭಟ್, ತಾಲೂಕ ಪಂಚಾಯತ ಸದಸ್ಯ ಆರ್.ಪಿ.ನಾಯ್ಕ, ರಾಜೇಶ ಭಂಡಾರಿ, ಹರಿಯಪ್ಪ ನಾಯ್ಕ, ಗಣೇಶ ನಾಯ್ಕ ಮುಗ್ವಾ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಕಲಾಶ್ರೀ ಪ್ರಶಸ್ತಿçಯನ್ನು ಹಿರಿಯ ಯಕ್ಷಗಾನ ಕಲಾವಿದರಾದ ಕೃಷ್ಣಗೌಡ ಗುಣಮಂತೆ ಇವರಿಗೆ ಪ್ರಧಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ “ಸುದರ್ಶನ” ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಅಭಿಮಾನಿಗಳು ಆಗಮಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment