ಹೊನ್ನಾವರ: ಸ್ನೇಹ ಸೌಹಾರ್ದತೆಯ ಮೂಲಕ ಹೊಸ ಯುಗವನ್ನು ಕಟ್ಟಲು ಯುವಕರು ಮುಂದಾಗಬೇಕು ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಹೇಳಿದರು.
ತಾಲೂಕಿನ ಮುಟ್ಟಾ ಗ್ರಾಮದ ಹಾಡಗೇರಿಯ ಶ್ರೀ ಮಹಾಗಣಪತಿ ಗೆಳೆಯರ ಬಳಗದ ಆಶ್ರಯದಲ್ಲಿ ಆಯೋಜಿಸಿದ ಕ್ರೀಡೆ ಮತ್ತು ಸಾಂಸ್ಕತಿಕ ಕಾರ್ಯಕ್ರಮ ಒಳಗೊಂಡ `ಹಾಡಗೇರಿ ಹಬ್ಬ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹಿರಿಯರ ಮಾರ್ಗದರ್ಶನದಲ್ಲಿ ಯುವಕರು ಒಗ್ಗಟ್ಟಾದರೆ ಏನನ್ನಾದರೂ ಸಾಧಿಸಲು ಸಾಧ್ಯ. ಪ್ರತಿಯೊಂದು ಕುಟುಂಬವೂ ಮಕ್ಕಳ ಶಿಕ್ಷಣಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕೆ ನಮ್ಮ ಸಹಕಾರವಿದೆ ಎಂದರು.
ಮಂಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗೆ ವೇದಿಕೆಯನ್ನು ಒದಗಿಸುವ ಮೂಲಕ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹೊಸ ಚಿಂತನೆಯೊಂದಿಗೆ ಯುವಕರು ಅಭಿವೃದ್ಧಿ ಪರವಾದ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವಿ.ಎನ್.ಭಟ್, ತಾ. ಪಂ ಸದಸ್ಯ ಲೊಕೇಶ ನಾಯ್ಕ, ಜಿ.ಪಂ.ಮಾಜಿ ಸದಸ್ಯ ಕೃಷ್ಣ ಗೌಡ, ಗ್ರಾ.ಪಂ.ಉಪಾಧ್ಯಕ್ಷ ಶ್ರೀಧರ ನಾಯ್ಕ, ಸದಸ್ಯರಾದ ಸವಿತಾ ನಾಯ್ಕ, ರೇಖಾ ನಾಯ್ಕ, ಫಾದರ್ ಎಡ್ವಿನ್ ಡಿಸೋಜಾ, ನಾಗರಾಜ ನಾಯ್ಕ ಮಾಸ್ತಿಹಳ್ಳ, ಹನುಮಂತ ನಾಯ್ಕ, ಸತೀಶ ನಾಯ್ಕ, ಸುಬ್ರಾಯ ನಾಯ್ಕ, ಗಣೇಶ ನಾಯ್ಕ ಇತರರಿದ್ದರು. ಗ್ರಾ.ಪಂ.ಅಧ್ಯಕ್ಷೆ ಸುನೀತಾ ಶೇಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸ್ಥಳಿಯ ಪ್ರಾಥಮಿಕ ಶಾಲೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಭಾರತಿ ಭಟ್ ಹಾಗೂ ಭಜನೆ ರಚನೆಕಾರ ಹಾಡಗೇರಿಯ ಗಣಪತಿ ಎಚ್. ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಲೂಕಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಖ್ಯಾತ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.
Leave a Comment