ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ಮಾರ್ಚ ೧ ರಂದುಕಳ್ಳತನವಾಗಿತ್ತು . ಈ ಪ್ರಕರಣ ಭೇದಿಸುವಲ್ಲಿ ಪೋಲಿಸರು ಯಶ್ವಸಿಯಾಗಿದ್ದಾರೆ.

ಗಣಪತಿ ಸಭಾಹಿತ ಅಗ್ರಹಾರ ಹೊನ್ನಾವರ ಠಾಣೆಯಲ್ಲಿ ನೀಡಿದ್ದ ದೂರು ಆದರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಶ್ರೀಧರ ಎಸ್.ಆರ್ ಸಿ.ಪಿ.ಐ ಹೊನ್ನಾವರ ವೃತ್ತ ರವರ ನೇತೃತ್ವದಲ್ಲಿ ಹೊನ್ನಾವರ ಠಾಣೆಯ ಅಧಿಕಾರಿ ಶ್ರೀ ಶಶಿಕುಮಾರ ಪಿ.ಎಸ್.ಐ ಕಾ&ಸು ಸಾವಿತ್ರಿ ನಾಯಕ ಪಿ.ಎಸ್.ಐ ಕ್ರೈಂ, ಗಣೇಶ ಎಚ್ ನಾಯ್ಕ ಎ.ಎಸ್.ಐ ಸಿ.ಎಚ್.ಸಿ ಶ್ರೀ ಕೃಷ್ಣಾ ಡಿ ಗೌಡ, ಸಿ.ಎಚ್.ಸಿ ಶ್ರೀ ಉದಯ ಮಗದೂರ, ಸಿ.ಎಚ್.ಸಿ ರಮಾನಂದ ನಾಯ್ಕ ಸಿ.ಎಚ್.ಸಿ ಶಿವಾನಂದ ಚಿತ್ರಗಿ ಸಿಪಿಸಿ ಶ್ರೀ ರಮೇಶ ಲಮಾಣಿ ಸಿಪಿಸಿ ರಯೀಸ್ ಭಗವಾನ್ ಸಿಪಿಸಿ ಮಹಾವೀರ ಎ.ಎಚ್.ಸಿ ಚಂದ್ರು ನಾಯ್ಕ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ ಸಿ.ಎಚ್.ಸಿ ಸುಧೀರ್ ಮಡಿವಾಳ, ) ಸಿಪಿಸಿ ರಮೇಶ ನಾಯ್ಕ ಇವರನ್ನೊಳಗೊಂಡ ತಂಡವು ದೇವಸ್ಥಾನ ಕಳ್ಳತನ ಪ್ರಕರಣವನ್ನು ಬೇಧಿಸಿ ಆರೋಪಿ ಅನಿಲ ತಂದೆ ವೆಂಕಟೇಶ ರಾಯ್ಕರ ಪ್ರಾಯ 33 ವರ್ಷ ಸಾ// ಸೋನಾರಕೇರಿ ಕರ್ಕಿ ಈತನನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸ್ತಗಿರಿ ಮಾಡಿ ಅರೋಪಿಯಿಂದ ಕಳುವಾದ ಸುಮಾರು ರೂ.84000/- ಮೌಲ್ಯದ 21 ಗ್ರಾಂ ಚಿನ್ನ ವನ್ನು ಹಾಗೂ ರೂ.4000 /- ಮೌಲ್ಯದ ಮೊಬೈಲ್ ಪೋನ್ ನ್ನು ಜಪ್ತುಪಡಿಸಿಕೊಂಡಿರುತ್ತಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿರುತ್ತಾನೆ.
ದೇವಸ್ಥಾನ ಕಳ್ಳತನ ಪ್ರಕರಣದ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿ ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ ರವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.
Leave a Comment