ತಾಲೂಕಿನಾದ್ಯಂತ ಏ.1ರಿಂದ 45 ವರ್ಷ ಮೇಲ್ಪಟ್ಟವರಿಗೂ ಕೊರೊನಾ ತಡೆ ಲಸಿಕೆ ವಿತರಣೆ ಕಾರ್ಯ ನಡೆಯಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿವಂತೆ ಸಹಾಯಕ ಆಯುಕ್ತೆ ಮಮತಾದೇವಿ, ಕೇಳಿಕೊಂಡರು.

ಅವರು ತಾಲೂಕಿನ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳೊಂದಿಗ ಸಭೆ ನಡೆಸಿದ್ದು.. ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ವಿತರಣೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದರ ಜೊತೆಗೆ ವಿವಿಧ ಗ್ರಾಮ ಪಂಚಾಯತ, ಪಟ್ಟಣ ಪಂಚಾಯತ, ಪುರಸಭಾ ವ್ಯಾಪ್ತಿಯಲ್ಲಿ ಇರುವ ಸಮುದಾಯ ಕೇಂದ್ರಗಳು ಹಾಗೂ ಈ ಹಿಂದೆ ಸ್ಥಾಪಿಸಲಾಗಿದ್ದ ಕೋವಿಡ್ ಸೆಂಟರ್ಗಳನ್ನು ಲಸಿಕೆ ವಿತರಣೆಗೆ ಬಳಸಿಕೊಳ್ಳುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ, ಅಲ್ಲದೇ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ವಿತರಣೆಯನ್ನು ಉಳಿದ ರೋಗಿಗಳ ತಪಾಸಣೆ, ಚಿಕಿತ್ಸೆಗೆ ಅಡಚಣೆಯುಂಟಾಗದಂತೆ ನಡೆಸಿಕೊಂಡು ಹೋಗಬೇಕು ಎಂದು ಮುಖಂಡರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸಿ ಮಮತಾದೇವಿ, ಎಲ್ಲರ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಭಟ್ಕಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್, ತಹಸೀಲ್ದಾರ್ ರವಿ ಚಂದ್ರ, ಭಟ್ಕಳ ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ಎಮ್.ಆರ್.ನಾಯ್ಕ, ಇಮ್ತಿಯಾಜ್ ಉದ್ಯಾವರ್, ಜೈಲಾನಿ ಶಾಬಂದ್ರಿ, ನಜೀರ್ ಕಾಶೀಮ್ಜಿ, ನಿಸಾರ್ ಟಾಪ್, ಯೂನುಸ್ ರುಕ್ನುದ್ದೀನ್, ಶ್ರೀಧರ ಮೊಗೇರ, ಶ್ರೀಕಾಂತ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
Leave a Comment