ಹೊನ್ನಾವರ: ತಾಲೂಕಿಗೆ ಇತ್ತೀಚಿಗೆ ಕ್ಷೇತ್ರಶಿಕ್ಷಣಾಧಿಕಾರಿಯಾಗಿ ಆಗಮಿಸಿದ ಸವಿತಾ ನಾಯ್ಕ ಇವರಿಂದ ತಾಲೂಕಿನ ಶಾಲೆಗಳ ಮಾಹಿತಿಯನ್ನು ಶಾಸಕ ಸುನೀಲ ನಾಯ್ಕ ಪಡೆದರು.
ಕ್ಷೇತ್ರದ ಪ್ರಾಥಮಿಕ ಹಾಗೂ ಪ್ರೌಡಶಾಲೆಯ ಸಮಸ್ಯೆಗಳನ್ನು ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಅಲ್ಲದೇ ಶಾಲಾ ರಿಪೇರಿ, ಕುಡಿಯುವ ನೀರಿನ ಸಮಸ್ಯೆ ಇರುವ ಶಾಲೆಗಳ ಮಾಹಿತಿಯನ್ನು ಕೂಡಲೇ ನೀಡಿದರೆ ಸಮಸ್ಯೆ ಬಗೆಹರಿಸುದಾಗಿ ಭರವಸೆ ನೀಡಿದರು. ಕ್ಷೇತ್ರದಲ್ಲಿ ಯಾವ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ನಿಮ್ಮ ಮೇಲಿದೆ ಎಂದು ಶಿಕ್ಷಣಾಧಿಕಾರಿಗೆ ಸೂಚಿಸಿದರು,
ಈ ಸಂದರ್ಭದಲ್ಲಿ ಕ್ಷೇತ್ರಸಮನ್ವಯಾಧಿಕಾರಿ ಎಸ್.ಎಂ.ಹೆಗಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಬಿ.ಆರ್.ಪಿ. ಸತೀಶ ನಾಯ್ಕ ಮಂಜುನಾಥ ನಾಯ್ಕ ಗೇರುಸೊಪ್ಪಾ ಉಪಸ್ಥಿತರಿದ್ದರು.
Leave a Comment