ಹೊನ್ನಾವರ : 2012 ರಲ್ಲಿನ ಹೊಡೆದಾಟ ಪ್ರಕರಣಕ್ಕೆ ದಾಖಲಾಗಿದ್ದ ಅಪರಾಧ ಐಪಿಸಿ ಪ್ರಕರಣದಲ್ಲಿ ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯ ಹೊನ್ನಾವರ ದಿಂದ ವಾರೆಂಟ್ ಹೊರಡಿಸಲಾಗಿದ್ದರೂ 08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಶಿವಾನಂದ ಹೊನ್ನಪ್ಪ ನಾಯ್ಕ ಪ್ರಾಯ 37 ವರ್ಷ, ಸಾ// ಗುಂಡಬಾಳ ಮುಟ್ಟಾ, ಹೊನ್ನಾವರ ತಾಲೂಕು ಈತನನ್ನು ದಿನಾಂಕ 12-04-2021 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಾನ್ಯ ನ್ಯಾಯಾಲಯದ ಆದೇಶದ ಮೇರೆಗೆ ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿರುತ್ತದೆ. ಶ್ರೀ ಶಿವಪ್ರಕಾಶ ದೇವರಾಜು ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ, ಶ್ರೀ ಬದ್ರಿನಾಥ ಎಸ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ, ಶ್ರೀ ಬೆಳ್ಳಿಯಪ್ಪ ಮಾನ್ಯ ಪೊಲೀಸ್ ಉಪಾಧೀಕ್ಷಕರು, ಭಟ್ಕಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀಧರ್ ಎಸ್.ಆರ್ ಸಿಪಿಐ ಹೊನ್ನಾವರ ರವರ ನೇತೃತ್ವದಲ್ಲಿ ಹೊನ್ನಾವರ ಠಾಣೆಯ ಶ್ರೀ ಶಶಿಕುಮಾರ ಪಿ.ಎಸ್.ಐ ಕಾ&ಸು, ಶ್ರೀಮತಿ ಸಾವಿತ್ರಿ ನಾಯಕ ಪಿ.ಎಸ್.ಐ ಅಪರಾಧ ವಿಭಾಗ , ವಿಶೇಷವಾಗಿ ಸಿಬ್ಬಂದಿಯವರಾದ ಶ್ರೀ ಕೃಷ್ಣಾ ಗೌಡ ಸಿ.ಎಚ್.ಸಿ, ಮಹಾವೀರ ಸಿ.ಪಿ.ಸಿ, ರಮೇಶ ಲಮಾಣಿ ಸಿಪಿಸಿ, ವಿದ್ಯಾ ಆಚಾರಿ ಮಹಿಳಾ ಪಿ.ಸಿ ಇವರುಗಳ ತಂಡ 08 ವರ್ಷಗಳಿಂದ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಪತ್ತೆ ಮಾಡಿ ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುತ್ತಾರೆ. ಪತ್ತೆ ಕಾರ್ಯ ಕೈಗೊಂಡ ತಂಡದಲ್ಲಿದ್ದ ಪೊಲೀಸ್ ಅಧಿಕಾರಿ/ ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ ರವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.
Leave a Comment