ಹೊನ್ನಾವರ : ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ತಂಗಳ್ (೫೭)ನಿನ್ನೆ ಬೆಳಗಾವಿಯ ಕೆ.ಎಲ್.ಇ.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸುದ್ದಿ ಕೇಳಿ ಇಡಿ ಕಾಂಗ್ರೆಸ್ ಪಕ್ಷಕ್ಕೆ ಆಘಾತ ತಂದಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.
ಅತ್ಯಂತ ಸ್ನೇಹಮಯಿಯಾಗಿದ್ದ,ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುತ್ತಿದ್ದ ಸೈಯದ್ ತಂಗಳ್ ಕಳೆದ ಹತ್ತಾರು ವರ್ಷಗಳಿಂದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅತ್ಯಂತ ಚುರುಕುತನದಿಂದ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಕೋರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ದೂರವಾಣಿ ಮೂಲಕ ನಾವೆಲ್ಲಾ ಶೀಘ್ರ ಗುಣಮುಖರಾಗುವಂತೆ ಹಾರೈಸಿ,ದೇವರಲ್ಲಿ ಪ್ರಾರ್ಥಿಸಿದ್ದೇವು.ಆದರೆ ಕಾಲನ ನೀರ್ಣಯ ಬೇರೆಯದೇ ಆಗಿತ್ತು.ಅವರು ಬದುಕಿ ಬರಲಿಲ್ಲ. ದೇವರು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಪತ್ನಿ, ಮಕ್ಕಳು,ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಜಗದೀಪ ತೆಂಗೇರಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.
Leave a Comment