ಹೊನ್ನಾವರ; ತಾಲೂಕಿನ ಔಷಧಿ ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೋವಿಡ್ ವಾಕ್ಸಿನ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚೀವರಿಗೆ ಮನವಿ ಸಲ್ಲಿಸಿದರು.ಕೋರೋನಾ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದು ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ ದಿನಸಿ ಸೇರಿದಂತೆ ಅಗತ್ಯವಸ್ತು ಖರೀದಿಗೆ ಸಮಯ ನಿಗಧಿ ಮಾಡಿದೆ.

ಆದರೆ ಔಷಧಿ ಅಂಗಡಿಗಳು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ದಿನವಿಡೀ ಕಾರ್ಯನಿರ್ವಹಿಸುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರರಿಗೆ ವಾಕ್ಸಿನ್ ನೀಡಲು ಆದೇಶಿಸುವಂತೆ ಹೊನ್ನಾವರ ತಾಲೂಕ ಆಸ್ಪತ್ರೆಯ ಆವರಣದಲ್ಲಿ ಮನವಿ ಸಲ್ಲಿಸಿದರು. ಸಚೀವ ಶಿವರಾಮ ಹೆಬ್ಬಾರ ಮಾತನಾಡಿ ಈ ಬಗ್ಗೆ ಜಿಲ್ಲಾ ಆರೊಗ್ಯಧಿಕಾರಿಗಳೊಂದಿಗೆ ಚರ್ಚಿಸಿ ತಿರ್ಮಾನಿಸುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಗಣಪತಿ ಹಳದೀಪುರ, ಮಹೇಶ ಕಲ್ಯಾಣಪುರ ಮತ್ತಿತರರು ಹಾಜರಿದ್ದರು.
Leave a Comment