ಭಟ್ಕಳ : ತಾಲ್ಲೂಕಿನ ಆಳ್ವೇಕೋಡಿಯಿಂದ ಮೀನುಗಾರಿಕೆಗೆ ತೆರಳಿದ ಪಾತಿದೋಣಿಯೊಂದು ಕಾಗೆಗುಡ್ಡ ಸಮೀಪದಲ್ಲಿ ಗಾಳಿಯ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದಾಗ ಕರಾವಳಿ ಕಾವಲು ಪಡೆಯ ಪೊಲೀಸರು ರಕ್ಷಣೆ ಮಾಡಿದ್ದಾರೆ.
ಆಳ್ವೇಕೋಡಿ ಸಮುದ್ರ ತೀರದಿಂದ ಮೀನುಗಾರಿಕೆ ತೆರಳಿದ ಶಿರಾಲಿ ಮೊಗೇರಕೇರಿ ನಿವಾಸಿ ಮಂಜುನಾಥ ಬೈರಾ ಮೊಗೇರ ಎನ್ನುವವರ ಪಾತಿದೋಣಿ ಕಾಗೆಗುಡ್ಡ ಸಮೀಪ ಗಾಳಿಯ ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆಯ ಪೊಲೀಸರು ದೋಣಿ ಸಮೇತ ಮೀನುಗಾರನನ್ನು ರಕ್ಷಣೆ ಮಾಡಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡ, ಸಿಬ್ಬಂದಿಗಳಾದ ಸಂಜೀವ ನಾಯಕ, ರವಿ ಮೆಸ್ತ, ಈರಪ್ಪ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Leave a Comment