ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ: 1. ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಬಾದಿತರಾಗಿರುವವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ.
2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, 07-05-2021 ಮತ್ತು ಸೇರ್ಪಡೆ ಆದೇಶ ದಿನಾಂಕ: 07-05-2021, 09-05-2021. 10-05-2021, 12-05-2021, 18-05-2021 ಮತ್ತು 19-05-2021 ರನ್ವಯ ದಿನಾಂಕ: 08-05-2021 ರ ಬೆಳಿಗ್ಗೆ 6-00 ಗಂಟೆಯಿಂದ ಅನ್ವಯವಾಗುವಂತೆ ಕೆಲವು ಚಟುವಟಿಕೆಗಳನ್ನು ನಿರ್ಬಂಧಿಸಿ ಆದೇಶಿಸಿದ್ದು, ಸದ್ರಿ ನಿಯಂತ್ರಣ ಕ್ರಮಗಳನ್ನು ಸರ್ಕಾರದ ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, ದಿನಾಂಕ: 21-05-2021 ರನ್ವಯ ದಿನಾಂಕ: 07-06-2021: ರ ಬೆಳಿಗ್ಗೆ 6-00 ಗಂಟೆಯವರೆಗೆ ವಿಸ್ತರಿಸಿ ಆದೇಶಿಸಿರುತ್ತದೆ.
3. ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲಾಗಿದೆ. ಅದಾಗ್ಯೂ ಸಹ ಜಿಲ್ಲೆಗೆ ಅನ್ವಯವಾಗುವಂತೆ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಇನ್ನೂ ಹೆಚ್ಚುವರಿಯಾಗಿ ಕೆಲವು ನಿರ್ಬಂಧಗಳನ್ನು ವಿಧಿಸುವುದು ಅನಿವಾರ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವರು ದಿನಾಂಕ: 23-05-2021 ರಂದು ನಿರ್ದೇಶನ ನೀಡಿರುತ್ತಾರೆ.
4. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ನಾತೆಯಿಂದ ವಿಪತ್ತು ನಿರ್ವಹಣಾ ಕಾಯಿದೆ 2005 ರ ಕಲಂ 34 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಮುಲ್ಲೈ ಮುಹಿಲನ್, ಭಾ.ಆ.ಸೇ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಉತ್ತರ ಕನ್ನಡ ಕಾರವಾರ ಆದ ನಾನು ಉತ್ತರ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ: 24-05-2021 ರ ಬೆಳಿಗ್ಗೆ 06-00 ಗಂಟೆಯಿಂದ ದಿನಾಂಕ: 07-06-2021 ರ ಬೆಳಿಗ್ಗೆ 6-00 ಗಂಟೆಯವರೆಗೆ ಪ್ರಚಲಿತದಲ್ಲಿರುವ ಸರ್ಕಾರದ ಮಾರ್ಗಸೂಚಿಗೆ ಹೆಚ್ಚುವರಿಯಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿದೆ.
*ಕ್ರಮಗಳೇನು?*
4. ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದನ್ನು ನಿಷೇಧಿಸಿದೆ.
5. ಈ ಅವಧಿಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಿಗ್ಗೆ 6-00 ಗಂಟೆಯಿಂದ 10-00 ಗಂಟೆಯವರೆಗೆ ದಿನನಿತ್ಯದ ಅಗತ್ಯ ವಸ್ತುಗಳು, ತರಕಾರಿ ಮತ್ತು ದಿನಸಿ ಮಾರಾಟಕ್ಕೆ ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಅವಕಾಶವಿರುತ್ತದೆ. ಮಾರಾಟದ ಸಮಯದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮುಂತಾದ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದುನ್ನು ಸ್ಥಳೀಯ ಆಡಳಿತ ಸಂಸ್ಥೆಗಳು ಹಾಗೂ ಪೋಲಿಸ್ ಇಲಾಖೆ ಖಚಿತಪಡಿಸಿಕೊಳ್ಳತಕ್ಕದ್ದು, ಈ ಅವಧಿಯಲ್ಲಿ ನಿರ್ಬಂಧಿತ ಇಲಾಖೆ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ.
6. ‘ಉಳಿದ ದಿನಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳು, ತರಕಾರಿ ಮತ್ತು ದಿನಸಿಗಳನ್ನು ಮನೆ ಮನೆಗೆ ಮಾರಾಟ ಮಾಡಲು ಮಾತ್ರ ಅವಕಾಶವಿರುತ್ತದೆ.
7. ಎಲ್ಲಾ ಖಾಸಗಿ ವಾಹನಗಳ ಸಂಚಾರವನ್ನು ( ವೈದ್ಯಕೀಯ ಸೇವೆ, ಅತೀ ತುರ್ತು ಸೇವೆಗಳನ್ನು ಹಾಗೂ ಸರಕಾರಿ ನೌಕರರನ್ನು ಅಧೀಕೃತ ಗುರುತಿನ ಚೀಟಿ ಇದ್ದಲ್ಲಿ ಮಾತ್ರ ಹೊರತುಪಡಿಸಿ) ಸಂಪೂರ್ಣವಾಗಿ ನಿಷೇಧಿಸಿದೆ. ಹಾಗೂ ಈ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಜಿಲ್ಲೆಯ ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆ (ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ) ವನ್ನ ಪಾಲಿಸುವುದರೊಂದಿಗೆ ಕೋವಿಡ್ ನಿಯಂತ್ರಣ ಮಾಡುವಲ್ಲಿ ಸಹಕರಿಸುವುದು, ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತರಳಿ ತಪಾಸಣೆ ಮಾಡಿಸಿಕೊಳ್ಳಲು ತಿಳಿಸಿದೆ.
8. ಈ ಮೇಲಿನ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ವಿಭಾಗ 51 ರಿಂದ 60 ರನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020 ರ ವಿಭಾಗ 4, 5 ಮತ್ತು 10 ರಂತೆ ಕ್ರಮಗಳನ್ನು ಜರುಗಿಸಲಾಗುವುದು
9. ಈ ಆದೇಶದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಪೋಲಿಸ್ ಅಧೀಕ್ಷಕರು, ಉತ್ತರ ಕನ್ನಡ, ಕಾರವಾರ ರವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬದ್ಧರಾಗಿರುತ್ತಾರೆ.
Leave a Comment