ಹೊನ್ನಾವರ; ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರ ಪ್ರತಿ ಬಾರಿ ಕಡಲಕೊರೆತ ಉಂಟಾಗುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಹಲವು ಪ್ರತಿಭಟನೆ ನಡೆದು ಕಳೆದ ಬಾರಿ ರಾಷ್ಟ್ರೀಯ ಹೆದ್ದಾರಿ ತಡೆದುಪ್ರತಿಭಟನೆ ನಡೆಸಿದ್ದರು.
ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಮೀನುಗಾರಿಕಾ ಸಚೀವರಾದ ಎಸ್.ಬಂಗಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುದಾಗಿ ಭರವಸೆ ನೀಡಿದರು. ಶಾಸಕ ದಿನಕರ ಶೆಟ್ಟಿ ಕಡಲಕೊರೆತದಿಂದ ಇಲ್ಲಿಯ ನಿವಾಸಿಗಳು ಭಯದಲ್ಲೆ ಜೀವನ ನಡೆಸುತ್ತಿದ್ದಾರೆ. ಕಡಲಕೊರೆತಕ್ಕೆ ಶಾಶ್ವತ ಪರಿಹಾರವಾಗಬೇಕಿದೆ ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ, ತಾ.ಪಂ.ಮಾಜಿ ಸದಸ್ಯ ತುಕರಾಂ ನಾಯ್ಕ, ಸಿ.ಪಿಐ ಶ್ರೀಧರ ಎಸ್.ಆರ್, ಪಿಎಸ್ಐ ಶಶಿಕುಮಾರ ಮೀನುಗಾರಿಕೆ ಹಾಗೂ ಬಂದರು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment