ಹೊನ್ನಾವರ: ಮೀನುಗಾರರ ಸಮಸ್ಯೆ ಆಲಿಸಲು ಬಾರದ ಹಿನ್ನೆಲೆಯಲ್ಲಿ ಸಚಿವರಿಗೆ ಸಲ್ಲಿಸಬೇಕಾಗಿದ್ದ ಮನವಿ ಪತ್ರವನ್ನು ಸಮುದ್ರಕ್ಕೆ ಪೂಜೆ ಎಸೆದಿರುವ ಘಟನೆ ಹೊನ್ನಾವರದ ಕಾಸರಕೋಡು ಬಂದರಿನಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಗೆ ಎರಡು ದಿನದ ಪ್ರವಾಸದ ನಿಮಿತ್ತ ಆಗಮಿಸಿದ್ದ ಮೀನುಗಾರಿಕಾ ಸಚಿವ ಎಸ್.ಅಂಗಾರ ಮುರುಡೇಶ್ವರದಿಂದ ನೇರವಾಗಿ ಭಟ್ಕಳದ ವಿವಿಧ ಬಂದರುಗಳಿಗೆ ತೆರಳಿ ಮೀನುಗಾರರ ಸಮಸ್ಯೆ ಆಲಿಸಿದ್ದರು.
ಆದರೆ ಹೊನ್ನಾವರದ ಕಾಸರಗೋಡು ಬಂದರಿನಲ್ಲಿ ಖಾಸಗಿ ವಾಣಿಜ್ಯ ಬಂದರು ನಿರ್ಮಿಸದಂತೆ ಮೀನುಗಾರರು ಸಚಿವರಿಗೆ ಮನವಿ ಸಲ್ಲಿಸಲು ಹಾಗೂ ಸ್ವಾಗತಿಸಲು ಸಿದ್ದತೆ ಮಾಡಿಕೊಂಡಿದ್ದರು. ಇದು ವಿವಾದಿತ ಪ್ರದೇಶವೆಂದು ಸಚಿವರು ತಮ್ಮ ಬಂದರು ಭೇಟಿಯನ್ನು ರದ್ದುಗೊಳಿಸಿ ಬಾರದೆ ಇರುವುದಕ್ಕೆ ಮೀನುಗಾರರು ಸಚಿವರಿಗೆ ಸಲ್ಲಿಸಬೇಕಿದ್ದ ಮನವಿ ಪತ್ರ ಹಾಗೂ ಸ್ವಾಗತಿಸಲು ತಂದಿದ್ದ ಹೂವಿನ ಪುಷ್ಪಗುಚ್ವವನ್ನು ಸಮುದ್ರಕ್ಕೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leave a Comment