ಯಲ್ಲಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಮಂಗಳವಾರ ಸಂಜೆ ತಾಲೂಕಿನ ಪ್ರಸಿದ್ಧ ಚಂದಗುಳಿ ಗಂಟೆ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.ಇದಕ್ಕೂ ಮುನ್ನ ನಂದೊಳ್ಳಿಯಲ್ಲಿ ಗ್ರಾಮಪಂಚಾಯತಿವತಿಯಿಂದ ಅಧ್ಯಕ್ಷ ನರಸಿಂಹ ಕೋಣೆಮನೆ ಈಶ್ವರಪ್ಪ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.ಈಸಂದರ್ಭದಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಪಂಚಾಯತರಾಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ವಾಯುವ್ಯರಸ್ತೆಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಬಿಜೆಪಿ ಪ್ರಮುಖರಾದ ಗಾಪಾಲಕೃಷ್ಣ ಗಾಂವಕರ, ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ರಾಘವೇಂದ್ರ ಭಟ್ಟ , ನಾಗರಾಜ ಕವಡಿಕೇರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ,ಚಂದಗುಳಿ ದೇವಸ್ಥಾನದ ಪ್ರಮುಖರಾದ ಲಕ್ಷಿö್ಮ ನಾರಾಯಣ ಭಟ್ಟ ತಾರೀಮಕ್ಕಿ ಅರ್ಚಕರಾದ ಗಣೇಶ ಭಟ್ಟ ಮುಂತಾದವರು ಇದ್ದರು.
Leave a Comment