ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ಪರಿಹಾರವಾಗಿ ರೂ.2000 ಆರ್ಥಿಕ ಧನಸಹಾಯ ದೊರೆಯಲಿದೆ.
ಮಡಿವಾಳರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್, ಮೆಕ್ಯಾನಿಕಲ್, ಚಿಂದಿ ಆಯುವರು, ಹಲಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವವರು ಅಸಂಘಟಿತ ವರ್ಗಗಳಿಗೆ ನೀಡಲಾಗುತ್ತಿರುವ ಪರಿಹಾರ ಪಡೆಯಲು ಅರ್ಹರಾಗಿದ್ದಾರೆ.
ಮೇ 19, 2021 ರ ಪೂರ್ವದಲ್ಲಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಕಾರ್ಮಿಕರು ಈ ನೆರವಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ ನೋಂದಣಿಯಾಗದ ಅಸಂಘಟಿತ ಕಾರ್ಮಿಕರು ಸೇವಾಸಿಂಧುವಿನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
1. ಆಧಾರ್ ಕಾರ್ಡ್*
2. ಬ್ಯಾಂಕ್ ಪಾಸ್ಬೂಕ್*
3. ಫೋಟೋ – 1
4. ಉದ್ಯೋಗ ದೃಢೀಕರಣ ಪ್ರಮಾಣ ಪತ್ರ
5. ಬಿ.ಪಿ.ಎಲ್ ಪಡಿತರ ಚೀಟಿ
6. ಮೊಬೈಲ್ ಸಂಖ್ಯೆ*
ಆಧಾರ್ ಕಾರ್ಡ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರದೊಂದಿಗೆ ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ
ಸೇವಾ ಸಿಂಧು ಪೋರ್ಟಲ್ ಗಾಗಿ ಕ್ಲಿಕ್ ಮಾಡಿ; https://sevasindhu.karnataka.gov.in/Sevasindhu/Kannada?ReturnUrl=%2F
Leave a Comment