ಹೊನ್ನಾವರ; ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೇಸ್ ಪಕ್ಷದ ಮಂಕಿಬ್ಲಾಕ್ ಮಟ್ಟದ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾಗಿ ರಾಜು ನಾಯ್ಕ ಮಂಕಿ ಆಯ್ಕೆಯಾಗಿದ್ದಾರೆ. ಕಳೆದ ೨೨ ವರ್ಷದಿಂದ ರಾಜಕೀಯ ಅನುಭವ ಹೊಂದಿದ್ದು, ಈ ಹಿಂದೆ ಜೆಡಿಎಸ್ ಪಕ್ಷದಿಂದ ಗುರುತಿಸಿಕೊಂಡು ಪಕ್ಷ ಸಂಘಟಿಸಿ ಸೈ ಎನಿಸಿಕೊಂಡಿದ್ದರು.
ತಾಲೂಕ ಪಂಚಾಯತಿ ಸದಸ್ಯರಾಗಿಯು ಆಯ್ಕೆಯಾಗಿದ್ದರು. ಕಳೆದ ನಾಲ್ಕು ವರ್ಷದಿಂದ ಕಾಂಗ್ರೇಸ್ ಪಕ್ಷ ಸೆರ್ಪಡೆಗೊಂಡು ಪಕ್ಷ ಬಲವರ್ಧನೆಗೆ ಶ್ರಮಿಸುತ್ತಿದ್ದಾರೆ. ಪ್ರಸುತ್ತ ಕಾಂಗ್ರೇಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದು ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ, ಶರವತಿ ಪತ್ತಿನ ಸಂಘದ ಅಧ್ಯಕ್ಷರಾಗಿ, ಪಿಎಲ್.ಡಿ ನಿರ್ದೇಶಕರಾಗಿ, ರಾಮಕ್ಷತ್ರಿಯ ಸಮಾಜದ ಉಪಾಧ್ಯಕ್ಷರಾಗಿಯು ಕಾರ್ಯನಿರ್ವಹಿಸುತ್ತಿದ್ದಾರೆ.
ಇದೀಗ ಕಾಂಗ್ರೇಸ್ ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ನಾಗರಾಜ ನಾರ್ವೆಕರ್ ರಾಜ್ಯಧ್ಯಕ್ಷರು ಹಾಗೂ ಕಾಂಗ್ರೇಸ್ ಜಿಲ್ಲಾಧ್ಯಕ್ಷರ ಸೂಚನೆ ಮೆರೆಗೆ ಮಂಕಿ ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಆಯ್ಕೆ ಕಾರಣರಾದ ಮಾಜಿ ಸಚೀವರು ಹಾಗೂ ಶಾಸಕರಾದ ಆರ್.ವಿ.ದೇಶಪಾಂಡೆ, ಮಾಜಿ ಶಾಸಕ ಮಂಕಾಳವೈದ್ಯ, ಮಂಕಿ ಬ್ಲಾಕ್ ಅಧ್ಯಕ್ಷ ಗೋವಿಂದ ನಾಯ್ಕ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಪದಾಧಿಕಾರಿಗಳಿಗೆ ರಾಜು ನಾಯ್ಕ ಅಭಿನಂದಿಸಿದ್ದಾರೆ.
Leave a Comment