• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬದುಕಿನ ಹಾಡು ಮುಗಿಸಿದ ಹನುಮಿ – ನೋವುಂಡು ನಗು ಚೆಲ್ಲಿ ಮರೆಯಾದ&ಜಾನಪದ ಹಾಡು ಹಕ್ಕಿ

June 23, 2021 by Vishwanath Shetty Leave a Comment

ಜಾನಪದ ಶ್ರೀ, ಜ್ಞಾನ ವಿಜ್ಞಾನ ಪೃಶಸ್ತಿ ಪುರಸ್ಕೃತ ಸಾವಿರ ಹಾಡುಗಳ ಸಾಮ್ರಾಜ್ಞಿ ಇನ್ನು ನೆನಪು ಮಾತ್ರ

ಹೊನ್ನಾವರ : ಎಳೆ ಬದುಕಿನ ಮುಂಜಾನೆಯಿಂದ ಇಳಿ ಬದುಕಿನ ಮುಸ್ಸಂಜೆಯವರೆಗೂ ಸಾಲು ಸಾಲು ನೋವು, ಸವಾಲುಗಳಿಂದ ಜರ್ಝರಿತವಾಗುತ್ತಲೇ ಸಾಗಿದರೂ ನಾನು ಹಾಡುವುದು ನನಗೆಂದು ಎದೆಯ ಭಾರ ಇಳಿಯಲೆಂದು ಎಮದುಕೊಳ್ಳುತ್ತಾ ಸಾವಿರಕ್ಕೂ ಹೆಚ್ಚು ಜಾನಪದ ಹಾಡುಗಳನ್ನು ನಾಲಿಗೆಯ ತುದಿಯಲ್ಲಿಟ್ಟುಕೊಂಡು ಕೇಳುಗರನ್ನು ಮೂಕವಿಸ್ಮಿತರನ್ನಾಗಿಸುತ್ತಲೇ ಸಾಧನೆಯ ಪಥದಲ್ಲಿ ಹೆಜ್ಜೆಹಾಕಿದ ಗಾಮೊಕ್ಕಲ ಸಮಾಜದ ಹೆಮ್ಮೆಯೆನಿಸಿದ್ದ ಜಾನಪದಶ್ರೀ ಹನುಮಿ ಕ್ಷೇತ್ರ ಗೌಡ ಇನ್ನು ನೆನಪು ಮಾತ್ರ.

FB IMG 1624356537905

ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಹನುಮಜ್ಜಿ ಜೂನ್ ೨೧ ರಂದು ತಮ್ಮ ೭೪ ರ ಹರೆಯದಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾಳೆ. ಕೇವಲ ೪ ನೇ ತರಗತಿ ಓದಿಕೊಂಡು, ೧೩ ಹರೆಯದಲ್ಲಿ ಮದುವೆಯ ಬಂಧನಕಕ್ಕೊಳಗಾಗಿ, ೪೦ ಜನರಿದ್ದ ಅವಿಭಕ್ತ ಕುಟುಂಬದಲ್ಲಿ ಹಿರಿ ಕಿರಿಯರೊಂದಿಗೆ ಏಗಬೇಕಾದ ಸವಾಲುಗಳೊಂದಿಗೆ ಜೀಕುತ್ತಲೇ ಜಾನಪದ ಹಾಡುಗಳ ಕಣಜವೆನ್ನಿಸಿಕೊಂಡಿದ್ದೊಂದು ಅದ್ಭುತವೇ ಸರಿ.೨೦೦೨ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜ್ಞಾನ ವಿಜ್ಞಾನ ಪ್ರಶಸ್ತಿ, ಕರ್ನಾಟಕ ಸರ್ಕಾರದ ಜಾನಪದಶ್ರೀ ಗೌರವಗಳನ್ನು ಮುಡಿಗೇರಿಸಿಕೊಂಡಿರುವ ೭೩ ವರ್ಷದ ಹಿರಿಯ ಜೀವ ಹನುಮಜ್ಜಿ. ಈಶಾನ್ಯ ರಾಜ್ಯ ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಡೆದ ರಾಷ್ಟ್ರೀಯ ಜಾನಪದ ಉತ್ತೇಜನ ಕೇಂದ್ರದ ಕಾರ್ಯಕ್ರಮದಲ್ಲಿಯೂ ಭಾಗವಹಿಸಿ ಗಾಮೊಕ್ಕಲ ಜಾನಪದ ಲೋಕದ ವೈಭವವನ್ನು ಶಕ್ತಿಯುತವಾಗಿ ಹಾಡುಗಳ ಮೂಲಕ ತೆರೆದಿಟ್ಟ ಸಾಧನೆ ಮಾಡಿದ್ದಾಳೆ.

ಎಲೆಮರೆಯ ಕಾಯಿಯಂತಿದ್ದ ಹನುಮಜ್ಜಿಯ ಜಾನಪದ ಪ್ರತಿಭೆಯಮೇಲೆ ಬೆಳಕು ಚೆಲ್ಲಿ ಹೊರ ಜಗತ್ತಿಗೆ ಪರಿಚಯಿಸಿದ್ದು ಖ್ಯಾತ ಜಾನಪದ ವಿದ್ವಾಂಸರಾದ ಡಾ.ಎನ್.ಆರ್.ನಾಯಕ ಡಾ ಶಾಂತಿ ನಾಯಕ ದಂಪತಿಗಳ ಒಡನಾಟ ಮತ್ತು ಅವರ ಮಗಳಾದ ಸವಿತಾ ಉದಯ ಅವರ ಸಹಕಾರ ಎನ್ನುವುದು ಸ್ಮರಣೀಯ.ಜೀವನ ವೃತ್ತಾಂತದಿ.ಗಣಪಿ ಮತ್ತು ದಿ ನಾರಾಯಣ ಗೌಡ ಇವರ ಮಗಳಾಗಿ ಜನಿಸಿದ ಹನುಮಿ ಅಜ್ಜಿಯ ತವರು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಅಳ್ಳಂಕಿ ಯರ್ಜಿನಮೂಲೆ ಎನ್ನುವ ಪುಟ್ಟ ಊರಾದರೂ ಆಕೆ ಹುಟ್ಟಿ ಬೆಳೆದಿದ್ದು ಮಾತ್ರ ತಾಯಿಯ ತವರುಮನೆ ಇದ್ದ ಶರಾವತಿಯ ನಡುಗಡ್ಡೆ ಹೈಗುಂದದಲ್ಲಾಗಿತ್ತು. ೧೩ ರ ಹರೆಯದಲ್ಲಿ ಮದುವೆಯಾಗಿ ಮಾಳಕೋಡಿನ ಗಂಡನ ಮನೆ ಸೇರಿದ ಈಕೆ ಐದು ಗಂಡು ಒಂದು ಹೆಣ್ಣುಮಗುವಿಗೆ ಜನ್ಮವಿತ್ತು ಸಾಕಿ ಸಲಹುತ್ತಲೇ ಹೆತ್ತವ್ವಳಿಂದ ಬಳುವಳಿಯಾಗಿ ಬಂದಿದ್ದ ಜಾನಪದ ಹಾಡುಗಳನ್ನು ಗುನುಗುನಿಸುತ್ತಾ ಕಲಾಲೋಕದಲ್ಲಿ ಬೆಳೆದ ಪರಿ ಅನನ್ಯ. ನೆರೆ ಹೊರೆಯಲ್ಲಿ ಹಿರಿಯರು ಹೇಳುತ್ತಿದ್ದ ಹಾಡುಗಳು ಕಿವಿದರೆಗೆ ತಾಕಿದರೆ ತಕ್ಷಣ ಅದನ್ನು ನೆಪಿಟ್ಟುಕೊಂಡು ಊರು ಕೇರಿಯಲ್ಲಿ ಯಾರ ಮನೆಯಲ್ಲಿ ಮದುವೆ, ಮುಂಜಿ, ಸೀಮಂತ,ನಾಮಕರಣ, ದೇವರಕಾರ್ಯ, ಹಬ್ಬ ಹರಿದಿನ ಶುಭ ಕಾರ್ಯವಿರಲಿ ಅಲ್ಲಿ ಹನುಮಜ್ಜಿ ಮತ್ತವಳ ಬಳಗದ ಹಾಡಿನ ಸುಗ್ಗಿ ನಡೆಯುತ್ತಿತ್ತು.ಬಹುಮುಖ ಪ್ರತಿಭೆ ಹನುಮಜ್ಜಿ ತನ್ನನ್ನು ಕೇವಲ ಜಾನಪದ ಹಾಡುಗಳಿಗೆ ಮಾತ್ರ ಸೀಮಿತವಾಗಿಸಿಕೊಂಡವಳಲ್ಲ.

FB IMG 1624356545907

ಕೇದಿಗೆ ಎಲೆಗಳಿಂದ ಚಾಪೆ ನೇಯುವುದು, ಶೇಡಿ (ಜೇಡಿ ಮಣ್ಣಿನ ಹುಡಿ) ಕಲೆಯಲ್ಲಿಯೂ ನಿಷ್ಣಾತರಾಗಿದ್ದಾಳೆ ಈಕೆ. ಅಡಿಕೆ ಸಿಪ್ಪೆಯನ್ನು ಕುಂಚಗಳನ್ನಾಗಿ ಮಾಡಿಕೊಂಡು ಬಾಗಿಲ ತೋರಣ, ಕೊಡೆಶೇಡಿ, ಕಳಸದ ಶೇಡಿ, ಸರ್ಪ ಶೇಡಿ, ಪೆಟ್ಟಿಗೆ ಶೇಡಿ, ಹಸಗಾರ(ಮದುಮಕ್ಕಳು ಕುಳಿತುಕೊಳ್ಳುವ ಸ್ಥಳದ ಹಿಂದಿನ ಗೋಡೆಯಮೇಲೆ ಬಿಡಿಸಲಾಗುವ ಕಲೆ) ತಳಕಲ ಶೇಡಿ, ಬಾಸಿಂಗ, ತೊಂಡ್ಲ ಹೀಗೆ ನಾನಾ ಬಗೆಯ ಚಿತ್ತಾರಗಳನ್ನು ಸೃಷ್ಠಿಸುವ ಕಲೆಯನ್ನೂ ಕರಗತಮಾಡಿಕೊಂಡಿದ್ದಳು.ತನ್ನ ಹಾಡುಗಳಿಂದ ಜಾನಪದ ಲೋಕವನ್ನು ಶ್ರೀಮಂತಗೊಳಿಸಿದ ಹನಮಿ ಕ್ಷೇತ್ರ ಗೌಡ ಅವರ ನಿಧನಕ್ಕೆ ಮಾಜಿ ಶಾಸಕ ಮಂಕಾಳ ವೈದ್ಯ, ತಾಲೂಕಾ ಪಂಚಾಯತ  ಸದಸ್ಯ ಗಣಪಯ್ಯ  ಗೌಡ, ಜಾನಪದ ವಿದ್ವಾಂಸರಾದ ಡಾ.ಎನ್.ಆರ್. ನಾಯಕ,ಡಾ.ಶಾಂತಿ ನಾಯಕ, ನಿವೃತ್ತ ಉಪನ್ಯಾಸಕ ಸಾಹಿತಿ ಡಾ.  ಶ್ರೀಪಾದ ಶೆಟ್ಟಿ, ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷ ತಿಮ್ಮಪ್ಪ. ಗೌಡ, ಶಿಕ್ಷಕರಾದ ಗಣಪಯ್ಯ ಗೌಡ ಮಾಳ್ಕೋಡ ಸೇರಿದಂತೆ ಸಾವಿರಾರು ಮಂದಿ ಸಂತಾಪ ಸೂಚಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಎದೆಯ ಭಾರ ಇಳಿಯಲೆಂದು, ಕರ್ನಾಟಕ ಸರ್ಕಾರದ ಜಾನಪದಶ್ರೀ ಗೌರವ, ಕೇದಿಗೆ ಎಲೆಗಳಿಂದ ಚಾಪೆ ನೇಯುವುದು, ಚಿತ್ತಾರಗಳನ್ನು ಸೃಷ್ಠಿಸುವ ಕಲೆ, ಜ್ಞಾನ ವಿಜ್ಞಾನ ಪ್ರಶಸ್ತಿ, ಮುಸ್ಸಂಜೆಯವರೆಗೂ ಸಾಲು ಸಾಲು ನೋವು, ಮೂಕವಿಸ್ಮಿತರನ್ನಾಗಿಸುತ್ತಲೇ ಸಾಧನೆಯ ಪಥ, ಶರಾವತಿಯ ನಡುಗಡ್ಡೆ ಹೈಗುಂದದ, ಶೇಡಿ (ಜೇಡಿ ಮಣ್ಣಿನ ಹುಡಿ) ಕಲೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...