ಯಲ್ಲಾಪುರ : ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನದ ಅಂಗವಾಗಿ ಬುಧವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಮಹಾನ್ ಚೇತನ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ,ಗೌರವ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಜಿ ಗಾಂವ್ಕರ್, ಪ್ರಧಾನ ಕಾರ್ಯದರ್ಶಿಗಳಾದ ರವಿ ಭಟ್ ಬರಗದ್ದೆ , ಪ್ರಸಾದ ಹೆಗಡೆ, ಯುವ ಮೋರ್ಚಾದ ಅಧ್ಯಕ್ಷರಾದ ಪ್ರದೀಪ ಯಲ್ಲಾಪುರಕರ್, ಮಹಿಳಾಮೋರ್ಚಾದ ಅಧ್ಯಕ್ಷೆ ಶೃತಿ ಹೆಗಡೆ, ತಾಲೂಕಾ ಪಂಚಾಯತ ಮಾಜಿ ಅಧ್ಯಕ್ಷೆ ಚಂದ್ರಕಲಾ ಭಟ್ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment