ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ಕಿರವತ್ತಿ ಹಾಗೂ ಹುಣಶೇಟ್ಟಿಕೊಪ್ಪ ಗ್ರಾಮದಲ್ಲಿ ” ಹೆಬ್ಬಾರ್ ರೇಷನ್ ಕಿಟ್ ” ವಿತರಣಾ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ತೆಂಗಿನಕಾಯಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಚಿವರ ಜನಪರ ಕಾರ್ಯವನ್ನು ಮೆಚ್ಚಿ ಶ್ಲಾಘನೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ, ಜಿಲ್ಲಾಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಹಾಗೂ ಯುವ ನಾಯಕ ವಿವೇಕ್ ಹೆಬ್ಬಾರ್, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್, ಪ್ರಮುಖರಾ ದ ವಿಜಯ ಮಿರಾಶಿ ಗ್ರಾಮ ಪಂಚಾಯತ ಅಧ್ಯಕ್ಷೆ ಮಂಜುಳಾ ವಾರದಾನಿ,ಉಪಾಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment