ಭಟ್ಕಳ: ಹಿಂಸಾತ್ಮಕವಾಗಿ 9 ಎತ್ತುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಭಾನವಾರ ಇಲ್ಲಿನ ಬಂದರ ರೋಡ 6ನೇ ಕ್ರಾಸ್ ಸಮೀಪ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಈ ಕಾರ್ಯಾಚರಣೆಯಲ್ಲಿ ಆರೋಪಿ ಪರಾರಿಯಾಗಿದ್ದುಆರೋಪಿಗಳನ್ನಾಗಿ ಮೋಹಿದ್ದೀನ್ ಪಾತೀಮಿ,ಹನೀಫ್ ಹಾಗೂ ವಾಹನದ ಚಾಲಕ ಎಂದು ಗುರುತಿಸಲಾಗಿದೆ.ಇವರು ಇಚರ್ ವಾಹನದಲ್ಲಿ ವದೆ ಮಾಡುವ ಉದ್ದೇಶದಿಂದ 6 ಲಕ್ಷಕ್ಕೂ ಅಧಿಕ ಮೌಲ್ಯದ 9 ಬ್ರಹತ್ ಆಕಾರದ ಎತ್ತುಗಳನ್ನು ಪಾಸ್ ಪರವಾನಿಗೆ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಾಟ ಮಾಡಿಕೊಂಡು ಹೋಗುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಭಟ್ಕಳ ನಗರ ಠಾಣೆ ಪೊಲೀಸರು ಬಂದರ ರೋಡ 6 ನೇ ಕ್ರಾಸ ಸಮೀಪ ಮುಗ್ದುಮ್ ಕಾಲೊನಿಯಲ್ಲಿ ದಾಳಿ ಮಾಡಿ ವಾಹನ ಸಮೇತ 9 ಎತ್ತುಗಳನ್ನು ರಕ್ಷಣೆ ಮಾಡಿದ್ದಾರೆ .
ಈ ಕುರಿತು ಭಟ್ಕಳ ನಗರ ಠಾಣೆಯ ಪಿ.ಎಚ್.ಐ ಎಚ್.ಪಿ ಕುಡಗುಂಟಿ ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಿ.ಎಸೈ ಎಚ್.ಪಿಈ ಕುಡುಗುಂಟಿ, ಗ್ರಾಮೀಣ ಠಾಣೆ ಪಿ.ಎಸೈ ಭರತ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Leave a Comment