ಭಟ್ಕಳ:ಮುರುಡೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರಿಶೀಲನೆ ನಡೆಸಿದರು.
ದೇವಾಯಕ್ಕೆ ಬರುವ ಪ್ರವಾಸಿಗರಿಗೆ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಹಾಗೂ ಸಾಮಾಜಿಕ ಅಂತ ಕಾಪಾಡುವಂತೆ ಸೂಚಿಸಲಾಗಿದ್ದು. ವಿಶೇಷವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರು 75 ಗಂಟೆಯೊಳಗಿನ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹಾಗೂ 1 ಸುತ್ತಿನ ಲಸಿಕೆ ಪಡೆದ ವರದಿ ತರುವುದನ್ನು ಕಡ್ಡಾಯ ಮಾಡಲಾಗಿದೆ .
ಹಾಗೂ ಬೇರೆ ರಾಜ್ಯದಿಂದ ಬರುವ ಪ್ರವಾಸಿಗರ ವಾಹನ ಸಂಖ್ಯೆ ಮತ್ತು ಅವರ ಮಾಹಿತಿಯನ್ನು ಪಡೆದುಕೊಳ್ಳುವಂತೆ ಸೂಚಿಸಿದ್ದಾರೆಅದರಂತೆ ತಾಲ್ಲೂಕಿನ ಪ್ರಸಿದ್ಧ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನ, ಕಡವಿನಕಟ್ಟಾ ದುರ್ಗಾಪರಮೇಶ್ವರಿ ದೇವಸ್ಥಾನ, ಸೋಡಿಗದ್ದೆ ಮಹಾಸತಿ ದೇವಸ್ಥಾನ, ಭಟ್ಕಳ ಚೆನ್ನಪಟ್ಟಣ ಹನುಮಂತ ದೇವಸ್ಥಾನ ಸೇರಿದಂತೆ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ಇಂದಿನಿಂದ ಕೋವಿಡ್ ಮಾರ್ಗಸೂಚಿ ಪಾಲಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ ಹಾಗೂ ಎಲ್ಲಾ ಧಾರ್ಮಿಕ ದೇವಸ್ಥಾನಗಳಲ್ಲಿ ನಿಗಾವಹಿಸಲು ಗ್ರಾಮಲೆಕ್ಕಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಸಹಾಯಕ ಆಯುಕ್ತ ತಿಳಿಸಿದ್ದಾರೆ.
Leave a Comment