ಸೋಮವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಅಥವಾ ಅನುತ್ತೀರ್ಣಳಾಗುವ ಭಯದಿಂದ ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಥೈರಾಯಿಡ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಿಪ್ಬನ್ಪೇಟೆ ಠಾಣಾ ವ್ಯಾಪ್ತಿಯ ಕೆಂಚನಾಲ ಗ್ರಾಮದಲ್ಲಿ ನಡೆದಿದೆ
. ಮೇರಿಮಾತಾ ಪ್ರೌಢಶಾಲೆ ವಿದ್ಯಾರ್ಥಿನಿ ಚೇತನ (16) ಆತ್ಮಹತ್ಯೆ ಗೆ ಯತ್ನಿಸಿದ ವಿದ್ಯಾರ್ಥಿನಿ. ಪರೀಕ್ಷೆ ಬರೆದು ಮನೆಗೆ ಬಂದ ಈಕೆ ಥೈರಾಯಿಡ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯಗೆ ಪ್ರಯತ್ನಿಸಿದ್ದಳು.
ಅಸ್ವ್ಥಸಳಾಗಿದ್ದನ್ನು ಗಮನಿಸಿದ ಪೋಷಕರು ತಕ್ಷಣ ರಿಪ್ಬನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಧಿಕಾರಿಗಳ ಸಲಹೆಯಂತೆ ಹೆಚ್ಚುವರಿ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
Leave a Comment