ಹೊನ್ನಾವರ: ಯುವಶಕ್ತಿ ರಾಷ್ಟçಶಕ್ತಿಯಾಗಿದ್ದು, ನಾಯಕತ್ವ ಗುಣ, ಅನುಭವ ಮತ್ತು ಅವಕಾಶ ನೀಡಬಲ್ಲ ಲಿಯೋಕ್ಲಬ್ಬಿಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ರಾಷ್ಟçಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್.ಜೆ.ಕೈರನ್ ಕರೆ ನೀಡಿದರು.
ಲಯನ್ಸ್ ವಿದ್ಯಾಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಅಡಿಯಲ್ಲಿ ಬರುವ ಲಿಯೋ ಕ್ಲಬ್ಬಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಿದ ಬಳಿಕ ಮಾತನಾಡಿ ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಈ ಲೋಕವನ್ನೇ ಬಿಟ್ಟು ಹೋಗುವಾಗ ನಾವು ಗಳಿಸಿದ ಸಂಪತ್ತನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ.
ಅದನ್ನು ಪುಣ್ಯದ ರೂಪದಲ್ಲಿ ತೆಗೆದುಕೊಂಡು ಹೋಗಲು ಸಾಧ್ಯ. ಆದ್ದರಿಂದ ಲಿಯೋ ಕ್ಲಬ್ ತಂಡವು ಸೇವಾ ಮನೋಭಾವನೆಯಂತಹ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು s ಸಮಾಜ ಸೇವೆಗೆ ಸನ್ನದ್ಧರಾಗುವಂತೆ ಕರೆ ನೀಡಿದರು.
ಎಸ್.ಡಿ.ಎಮ್. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿಜಯಲಕ್ಷಿö್ಮ ನಾಯ್ಕ ಮಾತನಾಡಿ ಮನಸ್ಸಿದ್ದೆಡೆ ಮಾರ್ಗವಿದ್ದು, ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಅಧ್ಯಯನದ ನಡುವೆಯು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು. ಇಂದಿನ ವಿದ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳಿದ್ದು, ಲಯನ್ ಸಂಸ್ಥೆಯ ಮಾರ್ಗದರ್ಶನದಲ್ಲಿ ಅವಕಾಶಗಳನ್ನು ಬಳಸಿಕೊಂಡು, ಬಿಡುವಿನ ವೇಳೆಯಲ್ಲಿ ಸಮಾಜಮುಖಿ ಕಾರ್ಯಗಳತ್ತ ಗಮನಹರಿಸುವ ಮೂಲಕ ಸೇವಾ ಮನೋಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಲಿಯೋ ಕ್ಲಬನ ನೂತನ ಪದಾಧಿಕಾರಿಗಳಿಗೆ ತಿಳಿಸಿದರು.
ಲಯನ್ಸ ಅಧ್ಯಕ್ಷ ವಿನೋಧ ನಾಯ್ಕ ಮಾವಿನಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿz ಜೋನ್ ಚೇರ್ ರಾಜೇಶ ಸಾಳೇಹಿತ್ತಲ್, ನಿಕಟಪೂರ್ವ ಅಧ್ಯಕ್ಷ ಪ್ರದೀಪ ಶೆಟ್ಟಿ, ಲಿಯೋ ಕ್ಲಬ್ ಅಧ್ಯಕ್ಷ ಸ್ವಾತಿ ಶೇಟ್, ಡಾ.ಸುಬ್ರಹ್ಮಣ್ಯ ಭಟ್ಟ, ಧನ್ಯಾ ಭಟ್ಟ, ಚಿತ್ರಾ ಭಟ್ಟ ಉಪಸ್ಥಿತರಿದ್ದರು. ಲಯನ್ ಕಾರ್ಯದರ್ಶಿ ಉದಯ ನಾಯ್ಕ ಸ್ವಾಗತಿಸಿ ಸುರೇಶ ಎಸ್. ಕಾರ್ಯಕ್ರಮ ನಿರ್ವಹಿಸಿದರು.
Leave a Comment