• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್ ವಿತರಣೆ

July 23, 2021 by Sachin Hegde Leave a Comment

ಹೊನ್ನಾವರ: ಕೋರೊನಾ ಎರಡನೇ ಅಲೆಯನ್ನು ದಿಟ್ಟವಾಗಿ ಎದುರಿಸಿದ ತಾಲ್ಲೂಕು ಆಸ್ಪತ್ರೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ತಾಲೂಕಿನ ಎಲ್ಲಾ 9 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕೆ.ಪಿ.ಸಿ.ಸಿ. ಸದಸ್ಯ ಪ್ರಶಾಂತ ದೇಶಪಾಂಡೆ 184 ಸಹಾಯ ಹಸ್ತ ಮೆಡಿಕಲ್ ಕಿಟ್ ರವಾನಿಸಿ ಅಭಿನಂದಿಸಿದ್ದಾರೆ.

ಈ ಮೆಡಿಕಲ್ ಕಿಟ್‍ಗಳನ್ನು ಶುಕ್ರವಾರ ಮುಂಜಾನೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ನಗರದ ಸರಕಾರಿ ಆಸ್ಪತ್ರೆಗೆ ತೆರಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ|| ಉಷಾ ಹಾಸ್ಯಗಾರ ಮತ್ತು ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ರಾಜೇಶ ಕಿಣಿ, ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಮಾಜಿ ಸಚಿವ ಆರ್. ವಿ. ದೇಶಪಾಂಡೆ ನಮ್ಮ ತಾಲೂಕಿನ ಹೆಲ್ತ್ ವಾರಿಯರ್ಸಗಳಿಗೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಈ ಹಿಂದೆಯು ಹಲವು ಬಾರಿ ಮೆಡಿಕಲ್ ಕಿಟ್ ಕಳುಹಿಸಿದ್ದರು.

ಸ್ವತಃ ಹೊನ್ನಾವರಕ್ಕೆ ಬಂದು ವಾರಿಯರ್ಸಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿ, ನಿಮ್ಮೊಂದಿಗೆ ನಾವಿದ್ದೇವೆ. ಅನ್ನುವ ಮಾತನಾಡಿದ್ದರು ಎಂದರು. ನಂತರ ಹಳದೀಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಡಾ|| ವೈಶಾಲಿ ನಾಯ್ಕ, ಕಡತೋಕಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಡಾ|| ಮಂಜುನಾಥ ಅವರಿಗೆ ಮತ್ತು ಅರೇಅಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಡಾ|| ಸಂತೋಷ ಅವರಿಗೆ ಕಾಂಗ್ರೆಸ್ ಸಹಾಯ ಹಸ್ತದ ಕಿಟ್‍ಗಳನ್ನು ಹಸ್ತಾಂತರಿಸಲಾಯಿತು.

IMG 20210723 150241 scaled
IMG 20210723 150148 scaled
IMG 20210723 150732 scaled
IMG 20210723 150935 scaled

ಈ ಸಂದರ್ಭದಲ್ಲಿ ಹೊನ್ನಾವರ ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಯುವ ಕಾಂಗ್ರಸ್ ಅಧ್ಯಕ್ಷ ಸಂದೇಶ ಶೆಟ್ಟಿ, ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ, ಅಲ್ಪಸಂಖ್ಯಾತ ವಿಭಾಗದ ಜಕ್ರಿಯಾ ಶೇಖ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಾಮೋದರ ನಾಯ್ಕ, ಸೇವಾದಳದ ಕೃಷ್ಣ ಮಾರಿಮನೆ, ಹಿಂ.ವರ್ಗ ವಿಭಾಗದ ಕಾರ್ಯದರ್ಶಿ ಗಜು ನಾಯ್ಕ, ಪಕ್ಷದ ಹಿರಿಯ ಮುಖಂಡರಾದ ಬಾಲಚಂದ್ರ ನಾಯ್ಕ, ಮಂಜುನಾಥ ಖಾರ್ವಿ, ಮಾದೇವ ನಾಯ್ಕ, ಕರ್ಕಿ, ಹನೀಫ್ ಶೇಖ, ಕೃಷ್ಣ ಹರಿಜನ, ಜೋಸೆಫ್ ಡಿ`ಸೋಜಾ, ರಾಘು ಮೇಸ್ತ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು. ,

ಶಿರ್ಲೆ ಜಲಪಾತಕ್ಕೆಂದು ಹೋಗಿ ನಾಪತ್ತೆಯಾದ6ಜನ ಸುರಕ್ಷಿತವಾಗಿ ಪತ್ತೆ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕಾಂಗ್ರೆಸ್ ಮುಖಂಡರು ನಗರದ ಸರಕಾರಿ ಆಸ್ಪತ್ರೆ, ಪಕ್ಷದ ಹಿರಿಯ ಮುಖಂಡ, ಬಾಲಚಂದ್ರ ನಾಯ್ಕ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...