ಕಾರವಾರ;
ಮೊಬೈಲ್ ಕರೆ, ಬ್ಯಾಂಕ್ ಖಾತೆಗೆ ಕೆವೈಸಿ ಅಪಡೇಟ್ ಮಾಡಬೇಕೆಂದು ನಂಬಿಸಿ ವ್ಯಕ್ತಿಯೋರ್ವ ನಿಂದ 2,91,100 ರೂ ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಬಗ್ಗೆ ನಗರದ ಸಿಇ ಎನ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಶಿರಸಿಯ ಪುಟ್ಟನ ಮನೆ ನಿವಾಸಿ ಪರಮೇಶ್ವರ ಅನಂತ ಭಟ್ಟ ಎಂಬಾತನಿಗೆ ಅಪರಿಚಿತ ನೋವ 9339193192 ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ ತಾನು ಎಸ್ ಬಿ ಐ (SBI) ಬ್ಯಾಂಕ್ ಅಧಿಕಾರಿಯಾಗಿದ್ದು ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ ಅಪಡೇಟ್ ಮಾಡಿಸಬೇಕು ಇಲ್ಲದಿದ್ದಲ್ಲಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದಾನೆ.
ಅನಾಮಿಕನ ಮಾತನ್ನು ನಂಬಿದ ದೂರುದಾರ ಪರಮೇಶ್ವರ ಭಟ್ಟ ತಮ್ಮ ಬ್ಯಾಂಕ್ ಖಾತೆ ನಂಬರ್ ನೀಡಿದ್ದಾರೆ. ಬಳಿಕ ಮೊಬೈಲ್ ಗೆ ಬಂದ ಓಟಿಪಿ ನಂಬರ್ ತಿಳಿಸುವಂತೆ ಹೇಳಿದ್ದಾನೆ. ಅದರಂತೆ ನಾಲ್ಕು ಬಾರಿ ಓಟಿಪಿ ನಂಬರ್ ಹೇಳಿದ್ದಾನೆ. ಬಳಿಕ ಕರೆ ಮಾಡಿದ ಅನಾಮಿಕ ವ್ಯಕ್ತಿ ಕರೆ ಕಟ್ ಮಾಡಿದ್ದಾನೆ.
ಬಳಿಕ ದೂರುದಾರ ಬ್ಯಾಂಕ್ ಖಾತೆ ಪರಿಶೀಲನೆ ನಡೆಸಿದಾಗ 2,91,100 ರೂ. ಹಣ ಕಡಿತ ವಾಗಿದ್ದು ಬೆಳಕಿಗೆ ಬಂದಿದೆ .ಈ ಕುರಿತು ಸಿಇ ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸ್ ನಿರೀಕ್ಷಕ ಸೀತಾರಾಮ ತನಿಖೆ ಕೈಗೊಂಡಿದ್ದಾರೆ.
Leave a Comment