ಕಾರವಾರ : ಇಲ್ಲಿನ ವಾಣಿಜ್ಯ ಬಂದರು ವಿಸ್ತರಣೆ ವಿರುದ್ಧ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಕಾರವಾರ ಬೈತಖೋಲ್ ಬಂದರು ವಿಸ್ತರಣೆ ತಡೆ ನೀಡುವಂತೆ ಕೋರಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಬೈತಖೋಲ್ ಬಂದರು ನಿರಾಶ್ರಿತರ ಯಾಂತ್ರೀಕೃತ ದೋಣಿ ಮೀನುಗಾರರ ಸಹಕಾರಿ ಸಂಘ ನಿಯಮಿತ ಇವರಿಂದ ರಿಟ್ ಅರ್ಜಿ 1332/2020ನೇದರಂತೆ ಅರ್ಜಿ ಸಲ್ಲಿಸಲಾಗಿದೆ.
ಹೈಕೋರ್ಟ್ ಈಬಗ್ಗೆ ವಿಜಾರಣೆ ಕೈಗೆತ್ತಿಕೊಂಡು ಬಂದರು ವಿಸ್ತರಣೆಗೆ ಮಧ್ಯಂತರದ ತಡೆ ಆದೇಶ ನೀಡಿದೆ. ಇತ್ತೀಚೆಗಷ್ಟೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಕಾರವಾರಕ್ಕೆ ಆಗಮನಿಸಿ ಸ್ಥಳ ವೀಕ್ಷಣೆ ಮಾಡಿದ್ದರು. ಈ ಹಿಂದೆ ತಾವು ಸಲ್ಲಿಸಿದ ಪರಿಸರ ಸಂಬAಧ ಪ್ರಮಾಣಪತ್ರವನ್ನು ವಾಪಸ್ಸು ಪಟೆದಿದ್ದರಿಂದ ಹೊಸದಾಗಿ ಪ್ರಮಾಣಪತ್ರ ಸಲ್ಲಿಸಲು ನ್ಯಾಯಾಲಯಕ್ಕೆ ಹೊಸದಾಗಿ ಪ್ರಮಾಣಪತ್ರ ಸಲ್ಲಿಸಿದ್ದರೆನ್ನಲಾಗಿದೆ.
ಇದೇಗ ರಾಜ್ಯ ಉಚ್ಛ ನ್ಯಾಯಾಲಯ ಅರ್ಜಿದಾರರ ಕೋರಿಕೆಯನ್ನು ಮುನ್ನಾ ಮಾಡದೆ ಅರ್ಜಿ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.
Leave a Comment