ಹೊಟ್ಟೆ ನೋವು;ವಿದ್ಯಾರ್ಥಿನಿ ಆತ್ಮಹತ್ಯೆ

ಸೊರಬ; ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೀನು ಬಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಚಂದ್ರಗುತ್ತಿಯಲ್ಲಿ  ನಡೆದಿದೆ. ಇದೇ ಊರಿನ ನಾಗರಾಜ್ ಮರಡಿ ಅವರ ಪುತ್ರಿ ಸುಚಿತ್ರ 17 ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೆಲದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ  ಪಡೆದುಕೊಳ್ಳುತ್ತಿದ್ದ ಳು. ಕುಟುಂಬಸ್ಥರು ಕೃಷಿ ಚಟುವಟಿಕೆಗೆ ಹೊಲಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾಳೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.