ಹೊನ್ನಾವರ ; ತಾಲೂಕಿನ ‘ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಅಗಸ್ಟ ೨ ಮತ್ತು ೫ ರಂದು ಶಾಸಕರಾದ ಸುನೀಲ ನಾಯ್ಕ ಹಾಗೂ ದಿನಕರ ಶೆಟ್ಟಿ ಚಾಲನೆ ನೀಡಲಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.
ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಭದ್ರತೆ ಒದಗಿಸಲು, ಲಭ್ಯವಿರುವ ಸಾಗುವಳಿ ಜಮೀನಿನಲ್ಲಿ ಗರಿಷ್ಠ ಕೃಷಿ ಉತ್ಪಾದನೆಯನ್ನು ಪಡೆಯಲು ಅವಶ್ಯವಿರುವ ತಂತ್ರಜ್ಞಾನ ತಲುಪಿಸಿ, ಏಕಗವಾಕ್ಷಿ ವಿಸ್ತರಣಾ ಪದ್ಧತಿಯಲ್ಲಿ ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸಲು ವಿವಿಧ ಅಭಿವೃದ್ಧಿ ಇಲಾಖೆಗಳ
ಸಮನ್ವಯದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಹೊನ್ನಾವರ ತಾಲೂಕಿ’ಕೃಷಿ ಅಭಿಯಾನ’ ಕಾರ್ಯಕ್ರಮವನ್ನು ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ “ ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದೆ. ಮಾವಿನಕುರ್ವಾ ಹೊಬಳಿ ಮಟ್ಟದ ಕಾರ್ಯಕ್ರಮವನ್ನು ಅಗಸ್ಟ ೨ ರಂದು ಶಾಸಕ ಸುನೀಲ ನಾಯ್ಕ ಹೆರಂಗಡಿ ಪಂಚಾಯತಿಯಲ್ಲಿ ಚಾಲನೆ ನೀಡಲಿದ್ದಾರೆ. ಹೊನ್ನಾವರ ಹೋಬಳಿ ಮಟ್ಟದ ಕಾರ್ಯಕ್ರಮವನ್ನು ಅಗಸ್ಟ್ ೫ ರಂದು ಸಾಲ್ಕೋಡ್ ಗ್ರಾಮ ಪಂಚಾಯತಿಯಲ್ಲಿ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಲಿದ್ದಾರೆ. ಎರಡು ಕಾರ್ಯಕ್ರಮ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿ ಎಂದು ಕೃಷಿ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment