ಹೊನ್ನಾವರ: ಪಟ್ಟಣದ ಬಂದರ ಪ್ರದೇಶದಲ್ಲಿರುವ ಮೀನು ಮಾರುಕಟ್ಟೆಗೆ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಮೀನುಮಾರಾಟ ಮಾಡುವ ಮಹಿಳೆಯರ ಜೊತೆ ಸಮಸ್ಯೆಯನ್ನ ಆಲಿಸಿ ಸುಸಜ್ಜಿತ ಕಟ್ಟಡ ನಿರ್ಮಾಣದ ಮನವಿಯನ್ನ ಸ್ವೀಕರಿಸಿದರು.ಮನವಿ ಸ್ವೀಕರಿಸಿದ ಬಳಿಕ ಮಾತನಾಡಿ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ರಾಜೇಶ ಭಂಡಾರಿ, ಪಟ್ಟಣ ಪಂಚಾಯತ ಅಧ್ಯಕ್ಷ ಶಿವರಾಜ ಮೇಸ್ತ, ಉಪಾಧ್ಯಕ್ಷೆ ಮೇಧಾ ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷ ವಿಜು ಕಾಮತ, ಪಟ್ಟಣ ಪಂಚಾಯತ ಸದಸ್ಯರಾದ ಮಹೇಶ ಮೇಸ್ತ, ನಾಗರಾಜ ಭಟ್, ವಿನೋದ ಮೇಸ್ತ,ಭಾಗ್ಯ ಮೇಸ್ತ, ಮುಖಂಡರಾದ ಉದಯ ಪ್ರಭು, ಉಮೇಶ ಸಾರಂಗ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment