• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಿನ್ನೆ ಭಟ್ಕಳದಲ್ಲಿ ಬಂಧನಕ್ಕೊಳಗಾದ ಶಂಕಿತ ಭಯೋತ್ಪಾದಕನನ್ನ ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

August 7, 2021 by bkl news Leave a Comment

ಭಟ್ಕಳ:ಭಯೋತ್ಪಾದಕ ಸಂಘಟನೆ ‘ಐಸಿಸ್’ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಭಟ್ಕಳದ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್.ಐ.ಎ), ಸ್ಥಳೀಯ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ ಬಂಧಿಸಿ ಇಂದು ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಶಂಕಿತ ಭಯೋತ್ಪಾದಕನನ್ನ  ಹಾಜರು ಪಡಿಸಿದ್ದಾರೆ.

 
ಜಾಲಿಯ ಉಮರ್ ಸ್ಟ್ರೀಟ್ ನಿವಾಸಿ ಜುಫ್ರಿ ಜವಾಹರ್ ದಾಮುದಿ ‌(30) ಬಂಧಿತ ಆರೋಪಿ. ಈತ ಉಗ್ರ ಸಂಘಟನೆಯ ನಿಯತಕಾಲಿಕೆ ‘ವಾಯ್ಸ್ ಆಫ್ ಹಿಂದ್’ ಅನ್ನು ದಕ್ಷಿಣ ಭಾರತದ ಭಾಷೆಗಳಿಗೆ ಭಾಷಾಂತರ ಮಾಡುತ್ತಿದ್ದ. ಈತನ ಹಾಗೂ ಭಟ್ಕಳದ ಸಾಗರ ರಸ್ತೆಯಲ್ಲಿರುವ ಬೇರೊಬ್ಬರ ಮನೆಯಲ್ಲಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದರು. ಎರಡೂ ಕಡೆಗಳಿಂದ ಮೊಬೈಲ್ ಫೋನ್, ಸಿಮ್‌ಕಾರ್ಡ್‌ಗಳು, ಹಾರ್ಡ್‌ಡಿಸ್ಕ್‌ಗಳು, ಮೆಮೊರಿ ಕಾರ್ಡ್‌ಗಳು ಸೇರಿದಂತೆ ವಿವಿಧ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. 

Screenshot 20210807 165731 WhatsApp


ಭಾರತದಲ್ಲಿ ಅಶಾಂತಿ ಉಂಟುಮಾಡಲು ‘ಐಸಿಸ್‌’ಗೆ ಮುಸ್ಲಿಂ ಯುವಕರನ್ನು ನೇಮಕಾತಿ ಮಾಡಿಕೊಳ್ಳುವ ಆರೋಪದಲ್ಲಿ ‘ವಾಯ್ಸ್ ಆಫ್ ಹಿಂದ್’ ವಿರುದ್ಧ ದೆಹಲಿಯಲ್ಲಿ ಈ ವರ್ಷ ಜೂನ್ 29ರಂದು ಪ್ರಕರಣ ದಾಖಲಾಗಿತ್ತು. ಅದರ ಬರಹಗಳನ್ನು ‘ಅಬು ಹಾಜಿರ್ ಅಲ್ ಬದ್ರಿ’ ಎಂಬ ಐ.ಡಿ ಮೂಲಕ ಭಾಷಾಂತರ ಮಾಡಲಾಗುತ್ತಿತ್ತು. ಆ ವ್ಯಕ್ತಿಯೇ ಶುಕ್ರವಾರ ಭಟ್ಕಳದಲ್ಲಿ ಬಂಧಿತನಾಗಿರುವ ಜುಫ್ರಿ ಜವಾಹರ್ ದಾಮುದಿ ಎಂದು ಗುರುತಿಸಲಾಗಿದೆ. ಈತ ‘ಐಸಿಸ್’ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಲ್ಲಿ 2016ರಲ್ಲಿ ಬಂಧಿತನಾಗಿರುವ ಅದ್ನಾನ್ ಹಸನ್ ದಾಮುದಿಯ ಕಿರಿಯ ಸಹೋದರ ಎಂದು ಎನ್.ಐ.ಎ ಪ್ರಕಟಣೆಯಲ್ಲಿ ತಿಳಿಸಿದೆ. 


ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 11ರಂದು ಎನ್.ಐ.ಎ ತಂಡವು ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ದಾಳಿ ಮಾಡಿತ್ತು. ಅನಂತನಾಗ್ ಜಿಲ್ಲೆಯ ಅಚಬಲ್‌ನಲ್ಲಿ ಉಮರ್ ನಿಸಾರ್, ತನ್ವೀರ್ ಅಹ್ಮದ್ ಭಟ್ ಹಾಗೂ ರಮೀಜ್ ಅಹ್ಮದ್ ಲೋನ್ ಎಂಬುವವರನ್ನು ಬಂಧಿಸಿತ್ತು 
ನಿನ್ನೆ ಭಟ್ಕಳದಲ್ಲಿ ಮೂವರನ್ನು ವಶಪಡಿಸಿಕೊಂಡು ಎನ್.ಐ. ಎ ತಂಡ ಹೊನ್ನಾವರ ತಾಲ್ಲೂಕಿನ ಮಂಕಿಯಲ್ಲಿ ಮೂವರನ್ನು ವಿಚಾರಣೆ ನಡೆಸಿ ಇಬ್ಬರನ್ನು ಬಿಡುಗಡೆಗೊಳಿಸಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದು. ಇಂದು ಬಂದನಕ್ಕೊಳಗಾದ ಶಂಕಿತ ಭಯೋತ್ಪಾದಕನನ್ನ  ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಭಟ್ಕಳ ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ ;ನಿಮ್ಮ ಸ್ನೇಹಿತರಿಗೂ ಫಾರ್ವರ್ಡ್ ಮಾಡಿ ಗುಂಪಿಗೆ ಸೇರಿಸಿ.
ಗ್ರುಪ್ ಸೇರಲು ಈ ಲಿಂಕ್ ಒತ್ತಿhttps://chat.whatsapp.com/GtLqeUMgaXDGRtGRyC9KnP

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: attended by a suspected terrorist, isi, ISIS related activity, joint operation with local police, N.I. A team interrogated three men at the Honnavar taluk monkey, released two, seizing three in Bhatkal, translated into South Indian languages, translated the voice of Hind, ಇಬ್ಬರನ್ನು ಬಿಡುಗಡೆ, ಎನ್.ಐ. ಎ ತಂಡ, ಐಸಿಸ್’ ಸಂಬಂಧಿತ ಚಟುವಟಿಕೆ, ದಕ್ಷಿಣ ಭಾರತದ ಭಾಷೆಗಳಿಗೆ ಭಾಷಾಂತರ, ಭಟ್ಕಳದಲ್ಲಿ ಮೂವರನ್ನು ವಶಪಡಿಸಿಕೊಂಡು, ವಾಯ್ಸ್ ಆಫ್ ಹಿಂದ್’ ಅನ್ನು, ಶಂಕಿತ ಭಯೋತ್ಪಾದಕನನ್ನ  ಹಾಜರು, ಸ್ಥಳೀಯ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ, ಹೊನ್ನಾವರ ತಾಲ್ಲೂಕಿನ ಮಂಕಿಯಲ್ಲಿ ಮೂವರನ್ನು ವಿಚಾರಣೆ ನಡೆಸಿ

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...