ಬೆಂಗಳೂರು : ಗಣೇಶ ಹಬ್ಬ ಮತ್ತು ಮೊಹರಂ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹಬ್ಬಗಳಿಗೆ ಮಾರ್ಗಸೂಚಿ ನೀಡಲಾಗಿದ್ದು. ನಿಯಮವನ್ನು ಪಾಲಿಸುವಂತೆ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗೆ ನಿರ್ಬಂಧ ಹೇರಲಾಗಿದೆ. ಗಣೇಶ ಮೂರ್ತಿ ತರುವಾಗ, ವಿಸರ್ಜನೆ ವೇಳೆ ಮೆರವಣಿಗೆ ನೀಷೇಧಿಸಲಾಗಿದೆ.
ಗಣೇಶ ಹಬ್ಬ : ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬ್ರೇಕ್ ಹಾಕಲಾಗಿದ್ದು. ಗಣಪತಿ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪೆಂಡಾಲ್ ಗಳನ್ನು ಹಾಕಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ. ಗಣಪತಿ ವಿಸರ್ಜನೆ ಮಾಡುವಾಗ ಮೆರವಣಿಗೆ ನಡೆಸುವಂತಿಲ್ಲ. ಗಣಪತಿ ಹಬ್ಬ ಆಚರಿಸಲು ದೇವಾಲಯಗಳಲ್ಲಿ ನಿತ್ಯವೂ ಸ್ಯಾನೀಟೈಸೇಶನ್ ಮಾಡಬೇಕು.
ಭಕ್ತರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು. ದೇವಾಲಯಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ ದೈಹಿಕ ಅಂತರ ಪಾಲನೆ ಕಡ್ಡಾಯವಾಗಿರುತ್ತದೆ. ದೇವಾಲಯದ ಹೊರಾಂಗಣದಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ವೇದಿಕೆ ನಿರ್ಮಾಣ ಮಾಡುವಂತಿಲ್ಲ. ವಿಸರ್ಜನೆ ಸಂದರ್ಭದಲ್ಲಿ ಮನರಂಜನೆ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿದೆ.
ಮೊಹರಂ : ಮೊಹರಂ ಆಚರಣೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಆಲಂ/ಪAಜಾ ಮತ್ತು ತಾಜಿಯತ್ಗಳನ್ನು ನಿಬಂಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೊಹರಂ ಪ್ರಾರ್ಥನಾ ಸಭೆ ಮೆರವಣಿಗೆ ನಷೇಧಿಸಲಾಗಿದೆ. ಸೂಕ್ತ ದೈಹಿಕ ನಂತರ ಪಾಲಿಸಬೇಕಿದೆ. ಕನಿಷ್ಠ ಸಂಖ್ಯೆಯ ಜನರು ಭಾಗಿಯಾಗಬೇಕು. ಆಲಂ/ಪAಜಾ ಮತ್ತು ತಾಜಿಯತ್ಗಳನ್ನು ಮುಟ್ಟುವಂತಿಲ್ಲ. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. 10 ವರ್ಷದೊಳಗಿನ ಮಕ್ಕಳು 60 ವರ್ಷ ಮೇಲ್ಪಟ್ಟವರು ಮನೆಯೊಳಗೆ ಇರಬೇಕು. ಪ್ರಾರ್ಥನೆಯ ಸಂದರ್ಭದಲ್ಲಿ ಕನಿಷ್ಠ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿರುತ್ತದೆ. ಮಸೀದಿಗಳನ್ನು ಹೊರಪಡಿಸಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಲಾಗಿದೆ. ಸಬಾಂಗಣ ಮತ್ತು ಸಮುದಾಯ ಭವನಗಳಲ್ಲಿ ಪ್ರಾರ್ಥನೆಗೆ ನಿರ್ಬಂಧವಿದೆ ಎಂದು ಹೇಳಲಾಗಿದೆ.
Leave a Comment