ಕಾರವಾರ : ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ ಅರೆಅಲೆಮಾರಿ ಸೂಕ್ಷö್ಮ ಮತ್ತು ಅತಿಸೂಕ್ಷö್ಮ ಸಮುದಾಯಗಳ ಅಭಿವೃಧ್ಧಿ ನಿಗಮದಿಂದ 2021-22 ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ನೇರೆ ಸಾಲ ಯೋಜನೆ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ,
ಮೈಕ್ರೋ (ಪೇರಣಾ) ಕ್ರೆಡಿಟ್ ಯೋಜನೆ (ನೊಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ) ಗಂಗಾ ಕಲ್ಯಾಣ ವೈಕಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ ಹಾಗೂ ಭೂ ಒಡೆತದ ಯೋಜನೆ ಕಾರ್ಯಕ್ರಮಗಳಡಿ 18 ರಿಂದ 60 ವರ್ಷದೊಳಗಿನ ಆಸಕ್ತರು ಸೆಪ್ಟೆಂಬರ್ 2 ರೊಳಗೆ ನಿಗಮದ ವ್ಯಪ್ತಿಯಲ್ಲಿ ಬರುವ ಸಮುದಾಯಗಳು http://www.adcl.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬಹುದು. ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೂ ಸಹಾ ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ಬಿ. ಆರ್ ಅಂಬೇಡರ್ ಅಭಿವೃದ್ಧಿ ನಿಗಮ ನಿಯಮಿತ ಹಳೆ ಜಿಲ್ಲಾ ಪಂಚಾಯತ್ ಕಟ್ಟಡ, ನೆಲಮಹಡಿ, ಮತಹಶೀಲ್ದಾರ ಕಚೇರಿ ಹಿಂಬಾಗ ದೂರವಾಣಿ ಸಂಖ್ಯೆ : 08382-226903 ಸಂಪರ್ಕಿಸಬಹುದಾಗಿದೆ. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ವಿಮಲಾ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment