ಹಾಸನ : ಯಾರಾದರೂ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರನ್ನು ಕಪ್ಪುಪಟ್ಟಿಗೆ ಸೇರಿಸುವುದಲ್ಲದೇ ರಾಜ್ಯದಿಂದಲೇ ಗಡಿಪಾರು ಮಾಡಲಾಗುವುದು ಎಂದು ಕೇಂದ್ರ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಎಚ್ಚರಿಸಿದರು.
ನಗರದ ಹೊರವಲಯದಲ್ಲಿ ಹಮ್ಮಿಕೊಳಲಾಗಿದ್ದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರರೊಂದಿಗೆ ಮಾತನಡಿದ ಅವರು ಅಫ್ಘಾನ್ನಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಅಫ್ಘಾನ್ನಲ್ಲಿ ಭಯಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ಅವರದು ಎಲುಬಿಲ್ಲದ ನಾಲಿಗೆ. ಅವರ ಮಾತು ಪಕ್ಷದ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ದೇಶದಲ್ಲಿ ರೈತರು ಸಂಕಷ್ಟದಲ್ಲಿದಾಗ 1 ಲಕ್ಷ 30 ಸಾವಿರ ಕೋಟಿ ಕೃಷಿ ಬಜೆಟ್ ನೀಡಿದ್ದೇವೆ. 2022ರೊಳಗೆ ದೇಶದಲ್ಲಿ ರೈತರ ಆದಾಯ ದ್ವಿಗುಣಗೊಳಿಸಬೇಕಾಗಿತ್ತು. ಆದರೆ ಕೊರೊನಾ ಕಾರಣ ಆರೋಗ್ಯ ಇಲಾಖೆಗೆ ಹೆಚ್ಚು ಹಣ ಖರ್ಚು ಮಾಡಿದ್ದೇವೆ. ನಮ್ಮ ದೇಶದಲ್ಲಿ ಲಸಿಕೆ ಕಂಡುಹಿಡಿದ ದೇಶದ 54 ಕೋಟಿ ಜನರಿಗೆ ಉಚಿತಾಗಿ ಲಸಿಕೆ ಹಾಕಿದ್ದೇವೆ ಎಂದರು ರೈತರಿಗೆ ರಸಗೊಬ್ಬರ ಬಳಸುವ ಬಗ್ಗೆ ಮಾಹಿತಿ ಕೊರತೆ ಇದ್ದು, ಅದನ್ನು ಮುಂದಿನ ದಿನಗಳಲ್ಲಿ ರೈತರಿಗೆ ಶಿಕ್ಷಣ ನೀಡಲಾಗುತ್ದೆ. ಇದು ರೈತರಿಗೆ ಹೆಚ್ಚು ಲಾಭವಾಗುತ್ತದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಹಾಸನ ಶಾಸಕ ಪ್ರೀತಂ ಜೆ.ಗೌಡ, ಸುರೇಶ್ ಮತ್ತಿತರರಿದ್ದರು.
Leave a Comment