ಹೊನ್ನಾವರ : ತಾಲೂಕಿನ ಹಳದಿಪುರದ ಕೇಶವ ದೇವಸ್ಥಾನದ ಹತ್ತಿರ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಮಾರ್ಥೊಮಾ ಶಾಲಾ ಶಿಕ್ಷಕಿ ಆಶಾ ರಾಜು ನಾಯ್ಕ(50) ನಿಧನರಾಗಿದ್ದಾರೆ.
ಗಂಭೀರ ಗಾಯಗೊಂಡಿದ್ದ ಆಶಾ ನಾಯ್ಕರನ್ನು ತಾಲೂಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಆದರ್ಶ ಆಸ್ಪತ್ರೆ ಸೇರಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ . ಪತಿ ರಾಜು ನಾಯ್ಕ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ.
ಲಾರಿ ಹೊನ್ನಾವರದಿಂದ ಕುಮಟ ಕಡೆ ಹೋಗುತ್ತಿದ್ದು ಲಾರಿ ಚಾಲಕನ ಅತಿವೇಗ ಮತ್ತು ಅಜಾರುಕತೆಯ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಸಂಭದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment